ಕಳೆದ ಎರಡು ದಿನ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ಈಗ ಚೆನ್ನಾಗಿ ಇದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್ ಮಾಡುವುದಿಲ್ಲ ಎಂದು ಶಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವರು, ರೆಸಿಡೆನ್ಸಿ ಶಾಲೆ ಬಗ್ಗೆ ಹೊಸ SOP ಏನಾದರೂ ಮಾಡ್ತೀರಾ ಅಂತ ಕೇಳಿದ್ದೇವೆ. ರಾಜ್ಯದಲ್ಲಿ ಶಾಲೆ ಬಂದ್ ಮಾಡುವ ಸ್ಥಿತಿ ಇಲ್ಲ. ತಾಂತ್ರಿಕ ಸಲಹಾ ಸಮಿತಿ ರಿಪೋರ್ಟ್ ನೀಡಿದ ಆದಾರ ಮೇಲೆ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಯಾವುದೇ
ಕಾರಣಕ್ಕೂ ಶಾಲೆ ಕ್ಲೋಸ್ ಆಗುವುದಿಲ್ಲ ಎಂದರು
ಹಾಸ್ಟೆಲ್ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡಬಾರದು. ಆದಷ್ಟು ದೂರು ದೂರ ಕುಳಿತು ಊಟ ಮಾಡಬೇಕು.
ಮಕ್ಕಳು ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರವೇ ಮಲಗಲು ಸೂಚನೆ ನೀಡಿದ್ದೇವೆ.
ಇಲ್ಲಿಯವರೆಗೆ 7 ರೆಸಿಡೆನ್ಸಿ ಶಾಲೆಯಲ್ಲಿ ಮಾತ್ರ ಸೋಂಕು ಪತ್ತೆ ಆಗಿದೆ. ಹಾಸ್ಟೆಲ್ ಸರಿಯಾಗಿ SOP ಪಾಲನೆ ಆಗ್ತಿದ್ಯಾ ಅಂತ ಬಿಇಓ ಮತ್ತು ಟಿಹೆಚ್ಓ ಸಮಿತಿ ನೇತೃತ್ವದಲ್ಲಿ ಮಾಡುವುದಾಗಿ ಹೇಳಿದರು
ರಾಜ್ಯದಲ್ಲಿ ಇಲ್ಲಿಯವರೆಗೂ172 ಶಿಕ್ಷಕ ಹಾಗೂ ಮಕ್ಕಳಿಗೆ ಕೊರೊನಾ ಬಂದಿತ್ತು. ಅದರಲ್ಲಿ 100 ಮಂದಿ ಚೇತರಿಸಿಕೊಂಡಿದ್ದಾರೆ. ಶಾಲೆಗಳಲ್ಲಿ ಎಲ್ಲಾ ಕಡೆಯೂ ಮಕ್ಕಳ ಹಾಜರಾತಿ ಕೂಡ ಚೆನ್ನಾಗಿದೆ. ಹಳೆಯ SOP ಏನಿದೆ ಅದೇ ಕಂಟಿನ್ಯೂ ಆಗಿದೆ. ರೆಸಿಡೆನ್ಸಿ ಶಾಲೆ ಹಾಗೂ ಹಾಸ್ಟೆಲ್ ನಲ್ಲಿ ವಿಶೇಷ ಗಮನ ಹರಿಸಲಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು