ಕಳೆದ ಎರಡು ದಿನ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ಈಗ ಚೆನ್ನಾಗಿ ಇದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್ ಮಾಡುವುದಿಲ್ಲ ಎಂದು ಶಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಚಿವರು, ರೆಸಿಡೆನ್ಸಿ ಶಾಲೆ ಬಗ್ಗೆ ಹೊಸ SOP ಏನಾದರೂ ಮಾಡ್ತೀರಾ ಅಂತ ಕೇಳಿದ್ದೇವೆ. ರಾಜ್ಯದಲ್ಲಿ ಶಾಲೆ ಬಂದ್ ಮಾಡುವ ಸ್ಥಿತಿ ಇಲ್ಲ. ತಾಂತ್ರಿಕ ಸಲಹಾ ಸಮಿತಿ ರಿಪೋರ್ಟ್ ನೀಡಿದ ಆದಾರ ಮೇಲೆ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಯಾವುದೇ
ಕಾರಣಕ್ಕೂ ಶಾಲೆ ಕ್ಲೋಸ್ ಆಗುವುದಿಲ್ಲ ಎಂದರು
ಹಾಸ್ಟೆಲ್ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡಬಾರದು. ಆದಷ್ಟು ದೂರು ದೂರ ಕುಳಿತು ಊಟ ಮಾಡಬೇಕು.
ಮಕ್ಕಳು ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರವೇ ಮಲಗಲು ಸೂಚನೆ ನೀಡಿದ್ದೇವೆ.
ಇಲ್ಲಿಯವರೆಗೆ 7 ರೆಸಿಡೆನ್ಸಿ ಶಾಲೆಯಲ್ಲಿ ಮಾತ್ರ ಸೋಂಕು ಪತ್ತೆ ಆಗಿದೆ. ಹಾಸ್ಟೆಲ್ ಸರಿಯಾಗಿ SOP ಪಾಲನೆ ಆಗ್ತಿದ್ಯಾ ಅಂತ ಬಿಇಓ ಮತ್ತು ಟಿಹೆಚ್ಓ ಸಮಿತಿ ನೇತೃತ್ವದಲ್ಲಿ ಮಾಡುವುದಾಗಿ ಹೇಳಿದರು
ರಾಜ್ಯದಲ್ಲಿ ಇಲ್ಲಿಯವರೆಗೂ172 ಶಿಕ್ಷಕ ಹಾಗೂ ಮಕ್ಕಳಿಗೆ ಕೊರೊನಾ ಬಂದಿತ್ತು. ಅದರಲ್ಲಿ 100 ಮಂದಿ ಚೇತರಿಸಿಕೊಂಡಿದ್ದಾರೆ. ಶಾಲೆಗಳಲ್ಲಿ ಎಲ್ಲಾ ಕಡೆಯೂ ಮಕ್ಕಳ ಹಾಜರಾತಿ ಕೂಡ ಚೆನ್ನಾಗಿದೆ. ಹಳೆಯ SOP ಏನಿದೆ ಅದೇ ಕಂಟಿನ್ಯೂ ಆಗಿದೆ. ರೆಸಿಡೆನ್ಸಿ ಶಾಲೆ ಹಾಗೂ ಹಾಸ್ಟೆಲ್ ನಲ್ಲಿ ವಿಶೇಷ ಗಮನ ಹರಿಸಲಾಗುತ್ತದೆ.
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
This website uses cookies.
Leave a Comment