February 21, 2026

Newsnap Kannada

The World at your finger tips!

kereal vamhari

ವಾಮಾಚಾರಕ್ಕಾಗಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧನ

Spread the love

ಗ್ರಾಮವೊಂದರ ಮನೆಯಲ್ಲಿ ನಿಧಿ ಶೋಧಕ್ಕಾಗಿ ಮನೆ ಒಳಗೆ ವಾಮಾಚಾರ, ಬಲಿಪೂಜೆ ನಡೆಸಿ ಮನೆಯ ಬೇಡ್ ರೂಂ ನಲ್ಲೆ ಸುಮಾರು 15 ಅಡಿ ಗುಂಡಿ ತೆಗೆದು ಬಲಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಕೊಡಲು ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್.ಗಣೇಶ್ ಹಾಗೂ ಉಡುಪಿ ಮೂಲದ ಸಾಧಿಕ್ ಎಂಬವರ ಮನೆಯ ಕೊಠಡಿಯಲ್ಲಿ ವಾಮಾಚಾರ, ಬಲಿಪೂಜೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ.

ಇವರ ಮನೆಗೆ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಪರಿಶೀಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದಿದ್ದಾರೆ.

ಇವರು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು 15 ಅಡಿಗಳಷ್ಟು ಮಣ್ಣು ತೆಗೆದು ಗುಂಡಿತೋಡಿ ವಾಮಾಚಾರ ನಡೆಸಿದ್ದಾರೆ.ನಿಧಿ ಶೋಧನೆಯ ಸಂಬಂಧ ಕೋಳಿ ಬಲಿ ಪೂಜೆ ನಡೆಸಿ, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿ ವ್ಯಕ್ತಿಗಳಿಂದ ತಿಳಿದುಬಂದಿದೆ.

ಈ ಇಬ್ಬರನ್ನು ಬಂಧಿಸಿದ್ದರಿಂದ ಮುಂದೆ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ಪೊಲೀಸರು ತಪ್ಪಿಸಿದಂತಾಗಿದೆ. ಅದು ಅಲ್ಲದೇ ಇವರು ಮೌಢ್ಯತೆಯಿಂದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು.

ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

error: Content is protected !!