ಗ್ರಾಮವೊಂದರ ಮನೆಯಲ್ಲಿ ನಿಧಿ ಶೋಧಕ್ಕಾಗಿ ಮನೆ ಒಳಗೆ ವಾಮಾಚಾರ, ಬಲಿಪೂಜೆ ನಡೆಸಿ ಮನೆಯ ಬೇಡ್ ರೂಂ ನಲ್ಲೆ ಸುಮಾರು 15 ಅಡಿ ಗುಂಡಿ ತೆಗೆದು ಬಲಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಕೊಡಲು ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್.ಗಣೇಶ್ ಹಾಗೂ ಉಡುಪಿ ಮೂಲದ ಸಾಧಿಕ್ ಎಂಬವರ ಮನೆಯ ಕೊಠಡಿಯಲ್ಲಿ ವಾಮಾಚಾರ, ಬಲಿಪೂಜೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ.
ಇವರ ಮನೆಗೆ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಪರಿಶೀಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದಿದ್ದಾರೆ.
ಇವರು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು 15 ಅಡಿಗಳಷ್ಟು ಮಣ್ಣು ತೆಗೆದು ಗುಂಡಿತೋಡಿ ವಾಮಾಚಾರ ನಡೆಸಿದ್ದಾರೆ.ನಿಧಿ ಶೋಧನೆಯ ಸಂಬಂಧ ಕೋಳಿ ಬಲಿ ಪೂಜೆ ನಡೆಸಿ, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿ ವ್ಯಕ್ತಿಗಳಿಂದ ತಿಳಿದುಬಂದಿದೆ.
ಈ ಇಬ್ಬರನ್ನು ಬಂಧಿಸಿದ್ದರಿಂದ ಮುಂದೆ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ಪೊಲೀಸರು ತಪ್ಪಿಸಿದಂತಾಗಿದೆ. ಅದು ಅಲ್ಲದೇ ಇವರು ಮೌಢ್ಯತೆಯಿಂದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು.
ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ