ಗ್ರಾಮವೊಂದರ ಮನೆಯಲ್ಲಿ ನಿಧಿ ಶೋಧಕ್ಕಾಗಿ ಮನೆ ಒಳಗೆ ವಾಮಾಚಾರ, ಬಲಿಪೂಜೆ ನಡೆಸಿ ಮನೆಯ ಬೇಡ್ ರೂಂ ನಲ್ಲೆ ಸುಮಾರು 15 ಅಡಿ ಗುಂಡಿ ತೆಗೆದು ಬಲಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಕೊಡಲು ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್.ಗಣೇಶ್ ಹಾಗೂ ಉಡುಪಿ ಮೂಲದ ಸಾಧಿಕ್ ಎಂಬವರ ಮನೆಯ ಕೊಠಡಿಯಲ್ಲಿ ವಾಮಾಚಾರ, ಬಲಿಪೂಜೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ.
ಇವರ ಮನೆಗೆ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಪರಿಶೀಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದಿದ್ದಾರೆ.
ಇವರು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು 15 ಅಡಿಗಳಷ್ಟು ಮಣ್ಣು ತೆಗೆದು ಗುಂಡಿತೋಡಿ ವಾಮಾಚಾರ ನಡೆಸಿದ್ದಾರೆ.ನಿಧಿ ಶೋಧನೆಯ ಸಂಬಂಧ ಕೋಳಿ ಬಲಿ ಪೂಜೆ ನಡೆಸಿ, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿ ವ್ಯಕ್ತಿಗಳಿಂದ ತಿಳಿದುಬಂದಿದೆ.
ಈ ಇಬ್ಬರನ್ನು ಬಂಧಿಸಿದ್ದರಿಂದ ಮುಂದೆ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ಪೊಲೀಸರು ತಪ್ಪಿಸಿದಂತಾಗಿದೆ. ಅದು ಅಲ್ಲದೇ ಇವರು ಮೌಢ್ಯತೆಯಿಂದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು.
ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment