ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಆಡಳಿತ ಮಂಡಳಿ ತಮಿಳುನಾಡಿನ ರಾಜಧಾನಿ ಚೆನ್ನೈನ ಟಿ ನಗರದ ಜಿಎನ್ ಚೆಟ್ಟಿ ರಸ್ತೆಯಲ್ಲಿ ತನ್ನ 2ನೇ ದೇವಸ್ಥಾನವನ್ನು ನಿರ್ಮಿಸಿದ್ದು, ಮಾರ್ಚ್ 17 ರಂದು ಉದ್ಘಾಟಿಸಲಿದೆ.
ಇದು ಟಿಟಿಡಿಯ ಮೊದಲ ದೇವಸ್ಥಾನ ಮತ್ತು ಮಾಹಿತಿ ಕೇಂದ್ರದ ಬಳಿ ಇದೆ. ಇದು ವೆಂಕಟೇಶ್ವರನ ದೈವಿಕ ಪತ್ನಿ ಪದ್ಮಾವತಿ ದೇವಿಗೆ ಸಮರ್ಪಿತವಾಗಿದೆ.
ಭಾನುವಾರದಿಂದ ದೇವಾಲಯದಲ್ಲಿ ಅಂಕುರಾರ್ಪಣದಿಂದ ಪ್ರಾರಂಭವಾಗುವ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ ಎಂದು ಟಿಟಿಡಿಯ ಚೆನ್ನೈ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮತ್ತು ಟಿಟಿಡಿ ಟ್ರಸ್ಟ್ನ ವಿಶೇಷ ಆಹ್ವಾನಿತ ಎಜೆ ಶೇಖರ್ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಮಾರ್ಚ್ 17 ರಂದು ಮಹಾಕುಂಭಾಭಿಷೇಕದೊಂದಿಗೆ ಮುಕ್ತಾಯಗೊಳ್ಳಲಿದೆ.
ದೇವಸ್ಥಾನಕ್ಕೆ ಭೂಮಿಯನ್ನು ಚಿತ್ರನಟಿ ಪಿ ಕಾಂಚನಾ ದಾನ ಮಾಡಿದ್ದಾರೆ. ದೇವಾಲಯವು 14880 ಚದರ ಅಡಿ ವಿಸ್ತಾರವಾಗಿದೆ. 7 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣವಾಗಿದೆ. 1.1 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ ಪೂರ್ಣಗೊಂಡಿದೆ. ಶೇಖರ್ ರೆಡ್ಡಿ ಅವರು ಕೊಡುಗೆಯಾಗಿ ನೀಡಿದ್ದಾರೆ. ಮಾರ್ಚ್ 17 ರಂದು ನಡೆಯುವ ಶ್ರೀ ಪದ್ಮಾವತಿ ಅಮ್ಮನವರ ಮಹಾಕುಂಭಾಭಿಷೇಕದಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.ಇದನ್ನು ಓದಿ –ಕಲಬುರಗಿಯಲ್ಲಿ ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ : ದೂರು ದಾಖಲು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

#Tirupati #chennai #secondTirupati #TTD #kannadanews



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ