ರಾಮನಗರಕ್ಕೆ ಮಾತ್ರ 144 ಸೆಕ್ಷನ್ ಹಾಕಿದ್ದಾರೆ ಇದರ ಅರ್ಥ ಏನು?
ಎಂದು ಪ್ರಶ್ನೆ ಮಾಡಿರುವ
ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ಅರೆ
ಕೋವಿಡ್ ನಿಯಮವನ್ನು ಪಾಲಿಸಿಕೊಂಡೇ ನಾವು ಪಾದಯಾತ್ರೆ ಮಾಡುತ್ತೇವೆ. ಯಾಕೆ ರಾಮನಗರಕ್ಕೆ ಮಾತ್ರ ನಿಷೇದಾಜ್ಞೆ ಹಾಕಿದ್ದಾರೆ? ಇದರ ಅರ್ಥ ಏನು? ಎಂದು ಪ್ರಶ್ನೆ ಮಾಡಿದ್ದಾರೆ.
ಬೊಮ್ಮಾಯಿ ನೀರಾವರಿ ಸಚಿವರಾಗಿದ್ದರು. ಅವರು ಏನು ಮಾಡಿದರು? ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಸರ್ಕಾರ 144 ಸೆಕ್ಷನ್ ಹಾಕಿದೆ. ನಾವು 15 ಜನ ಪಾದಯಾತ್ರೆ ಮಾಡಿದ್ರೆ ಬಿಡ್ತೇವೆ ಅಂತ ಕಾರಜೋಳ ಹೇಳ್ತಾರೆ. 15 ಜನ ಒಟ್ಟಿಗೆ ನಡೆದರೆ ಅದು 144 ಕಲಂ ಉಲ್ಲಂಘನೆ ಆಗೋದಿಲ್ಲವಾ? ನಾವು ನಿಯಮದ ಪ್ರಕಾರ ಪಾದಯಾತ್ರೆ ಮಾಡ್ತೇವೆ. ಎಲ್ಲೂ ಇಲ್ಲದ 144 ಕಲಂ ರಾಮನಗರಕ್ಕೆ ಮಾತ್ರ ಯಾಕೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕುವ ಹುನ್ನಾರ. ಎರಡೂವರೆ ವರ್ಷದಿಂದ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಸುಳ್ಳು ಜಾಹೀರಾತು ನೀಡಿ ಹಾದಿ ತಪ್ಪಿಸುವ ಹುನ್ನಾರ ನಡೆಸಿದೆ. ನಾವು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ. ನಿಷೇದಾಜ್ಞೆ ಹಾಕಿದ್ರೆ ಐದೈದು ಜನ ಹೋಗಿ ಮಾಡ್ತೇವೆ ಎಂದರು.
ಬಿಜೆಪಿಯಿಂದ
ವಿಳಂಬದ್ರೋಹ ಆಗಿದೆ. ಯಾವುದೇ ಅಡೆತಡೆ ಇಲ್ಲದಿದ್ದರೂ ಯಾಕೆ ಕೆಲಸ ಮಾಡಿಲ್ಲ. ಕೇಂದ್ರಕ್ಕೆ ಒತ್ತಾಯ ಮಾಡೇ ಇಲ್ಲ. ಯಾಕೆ ರಾಜಕೀಯ ಬಣ್ಣ ನೀಡುವ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಸರ್ಕಾರ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಿಡಿಕಾರಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment