ಸಿಕಂದರಾಬಾದ್​​ ಹಿಂಸಾಚಾರ: ಮಾಜಿ ಸೈನಿಕನ ಕೈವಾಡ- ಮಾಸ್ಟರ್​ ಮೈಂಡ್​ ಬಂಧನ

Team Newsnap
1 Min Read

ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್​ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.

ಆವುಲ ಸುಬ್ಬಾ ರಾವ್​​ನನ್ನು ಬಂಧಿಸಲಾಗಿದೆ. ಈತ ಮಾಜಿ ಸೈನಿಕ. ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ – ದ್ವಿತೀಯ PUC ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಪಾಸ್​: ತಂದೆಗೆ ಹೆಚ್ಚು ಅಂಕ

ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ.

ವಾಟ್ಸಾಪ್​ ಮೂಲಕ ಮೆಸೇಜ್​ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತ ರಾವ್​ ಆಂದ್ರಪ್ರದೇಶದ ಪ್ರಕಾಶಮ್​ ಜಿಲ್ಲೆಯವನು.

ಕಳೆದ ಕೆಲವು ವರ್ಷಗಳಿಂದ ನರಸರಾವ್​ಪೇಟೆ, ಹೈದರಾಬಾದ್​ ಮತ್ತು ಸೇರಿದಂತೆ 7 ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್​, ಗುಂಟೂರ್​, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Share This Article
Leave a comment