ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.
ಆವುಲ ಸುಬ್ಬಾ ರಾವ್ನನ್ನು ಬಂಧಿಸಲಾಗಿದೆ. ಈತ ಮಾಜಿ ಸೈನಿಕ. ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ – ದ್ವಿತೀಯ PUC ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಪಾಸ್: ತಂದೆಗೆ ಹೆಚ್ಚು ಅಂಕ
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ.
ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತ ರಾವ್ ಆಂದ್ರಪ್ರದೇಶದ ಪ್ರಕಾಶಮ್ ಜಿಲ್ಲೆಯವನು.
ಕಳೆದ ಕೆಲವು ವರ್ಷಗಳಿಂದ ನರಸರಾವ್ಪೇಟೆ, ಹೈದರಾಬಾದ್ ಮತ್ತು ಸೇರಿದಂತೆ 7 ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್, ಗುಂಟೂರ್, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್