ಸಿಕ್ಕಿ ಹಾಕಿಕೊಳ್ಳುತ್ತೇವೆ ಎಂಬ ಭಯದಿಂದ ಕಸ್ಟಮ್ಸ್ ಅಧಿಕಾರಿ ದಂಪತಿಗಳು ಸಾಗಿಸುತ್ತಿದ್ದ 75 ಲಕ್ಷ ರು ನಗದು ಹಾಗೂ ಚಿನ್ನಾಭರಣವನ್ನು,ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಇರ್ಪಾನ್ ದಂಪತಿಗಳು ಬೆಂಗಳೂರು ಮೂಲಕ ಲಖನೌ ಗೆ ಪ್ರಯಾಣ ಮಾಡಲಿದ್ದರು. ಈ ಅಧಿಕಾರಿಯ ಪತ್ನಿ ಬಾತ್ ರೂಂನಲ್ಲಿ 10 ಲಕ್ಷ ರುಪಾಯಿ ಬಿಸಾಡಿದ್ದೂ ಸೇರಿ ಒಟ್ಟಾರೆ ದಂಪತಿ ಬಳಿಯಿಂದ ಬರೋಬ್ಬರಿ 75 ಲಕ್ಷ ರು ಗಳನ್ನು ಸಿಐಎಸ್ಎಫ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ತಂಡ ಚೆನ್ನೈನಲ್ಲಿ ಕಸ್ಟಮ್ಸ್ ಅಧಿಕಾರಿಯಾಗಿರುವ ಮೊಹಮ್ಮದ್ ಇರ್ಫಾನ್ ಅಹ್ಮದ್ ಹಾಗೂ ಪತ್ನಿ ಬಳಿ ತಪಾಸಣೆ ಮಾಡಿದ ವೇಳೆ ಈ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.
ಈ ದಾಳಿಯಿಂದ ಅಧಿಕಾರಿ ಪತ್ನಿ ತಪ್ಪಿಸಿಕೊಳ್ಳಲು ತನ್ನ ಬಳಿಯಿದ್ದ 10 ಲಕ್ಷ ರುಗಳನ್ನು ಬಾತ್ ರೂಂನಲ್ಲಿ ಬಿಸಾಡಿದ್ದಾರೆ. ಆ ಹಣವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.
ಸಿಐಎಸ್ಎಫ್ ಅಧಿಕಾರಿಗಳು ದಂಪತಿಯಿಂದ ಎರಡು ದುಬಾರಿ ಮೌಲ್ಯದ ಮೊಬೈಲ್, ಆ್ಯಪಲ್ ವಾಚ್, ಚಿನ್ನಾಭರಣ, 74 ಲಕ್ಷದ 81 ಸಾವಿರ 500 ರು ನಗದನ್ನು ಜಪ್ತಿ ಮಾಡಲಾಗಿದೆ.
ಈ ಪ್ರಕರಣದ ತನಿಖೆಯನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment