ಮೂಢನಂಬಿಕೆಗೆ ಸೆಡ್ಡು : ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢ ನಂಬಿಕೆಯನ್ನು ಧಿಕ್ಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ.

ಬೊಮ್ಮಾಯಿ‌ ಇಂದು ಮತ್ತು ನಾಳೆ (ಅ. 6 ಮತ್ತು7) ಎರಡು ದಿನಗಳ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

puttraju a

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಮೈಸೂರು ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಗುರುವಾರ ಬೆಳಗ್ಗೆ ಚಾಮುಂಡಿ ದೇವಿಯ ದರ್ಶನ ಪಡೆಯಲಿದ್ದು, ದಸರಾ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ.

ಗುರುವಾರ ಬೆಳಗ್ಗೆ 10.40 ಕ್ಕೆ ಮೈಸೂರು ವಿಮಾನನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಬರಮಾಡಿಕೊಂಡು ಆನಂತರ 3.30 ಕ್ಕೆ ಚಾಮರಾಜನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ 4.40 ಕ್ಕೆ ರಾಷ್ಟ್ರಪತಿಗಳನ್ನು ಬೀಳ್ಕೊಡಲಿದ್ದಾರೆ. ನಂತರ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ವಾಪಾಸ್​ ಆಗಲಿದ್ದಾರೆ.

Share This Article
Leave a comment