ತಮಿಳುನಾಡಿನಲ್ಲಿ ಚುನಾವಣೆ ಅಬ್ಬರ ಹೆಚ್ಚಾಗಿದೆ. ಪತ್ರಕರ್ತ ಕಂ ಪಕ್ಷೇತರ ಅಭ್ಯರ್ಥಿ 33 ವರ್ಷದ ಸರವಣನ್ ಅವರು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರನ್ನೂ ಅಚ್ಚರಿ ಮೂಡಿಸಿದೆ.
ಮಧುರೈ ದಕ್ಷಿಣ ಕ್ಷೇತ್ರದಿಂದ ತುಲಮ್ ಸರವಣನ್ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ.
ಕಸದ ಬುಟ್ಟಿ ಇವರ ಚಿಹ್ನೆ :
ಇತರ ಅಭ್ಯರ್ಥಿಗಳಿಗಿಂತ ತುಂಬಾನೇ ವಿಭಿನ್ನವಾದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಸದ್ಯ ಈ ಚುನಾವಣಾ ಪ್ರಣಾಳಿಕೆ ತಮಿಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಇವರ ಚುನಾವಣಾ ಚಿಹ್ನೆ ‘ಕಸದ ಬುಟ್ಟಿ’ಯಾಗಿದೆ.
ಪ್ರಣಾಳಿಕೆ ಹೇಗಿದೆ ? :
ನಾನು ಗೆದ್ದು ಬಂದರೆ ಮಿನಿ ಹೆಲಿಕಾಪ್ಟರ್, ಪ್ರತಿ ಮನೆಗೂ ವರ್ಷಕ್ಕೆ 1 ಕೋಟಿ, ಮದುವೆಗಳಿಗೆ ಚಿನ್ನಾಭರಣ, ಮೂರು ಮಹಡಿಯ ಮನೆ ನೀಡುತ್ತೇನೆ. ಅಲ್ಲದೆ ಚಂದ್ರನಲ್ಲಿಗೆ ಪ್ರವಾಸ ಹೋಗಲು ಅನುಕೂಲ ಮಾಡಿಕೊಡುತ್ತೇನೆ ಎಂದು ಹೇಳುವ ಮೂಲಕ ಮತದಾರರ ಅಂಗೈಯಲ್ಲಿ ಚಂದ್ರನನ್ನು ತೋರಿಸಿದ್ದಾರೆ.
ಇಷ್ಟು ಮಾತ್ರವಲ್ಲದೆ ಬೇಸಿಗೆಯ ಬಿಸಿಲನ್ನು ನಿಯಂತ್ರಿಸಲು ತಮ್ಮ ಕ್ಷೇತ್ರದಲ್ಲಿ 300 ಅಡಿ ಎತ್ತರದ ಕೃತಕ ಮಂಜುಗಡ್ಡೆಯನ್ನೇ ನಿರ್ಮಿಸುತ್ತೇನೆ. ಗೃಹಿಣಿಯರಿಗೆ ಮನೆಕೆಲಸದಲ್ಲಿ ಸಹಾಯ ಮಾಡಲು ರೋಬೋಟ್, ಪ್ರತಿ ಮನೆಗೆ ದೋಣಿ ನೀಡುತ್ತೇನೆ. ಮದುವೆಯಾಗದೆ ಇದ್ದ ಯುವಕರು ತಮ್ಮ ವೃದ್ಧ ಪೋಷಕರೊಂದಿಗೆ ಇದ್ದರೆ ಅಂತವರಿಗೂ ಸಹಾಯ ಮಾಡುತ್ತೇನೆ. ಹೀಗೆ ಅನೇಕ ಆಶ್ವಾಸನೆಗಳನ್ನು ನೀಡುವ ಮೂಲಕ ಮತದಾರರ ಗಮನ ಸೆಳೆಯುವಂತೆ ಮಾಡಿದ್ದಾರೆ.
ಯಾವ ಪ್ರಣಾಳಿಕೆ ಭರವಸೆಯನ್ನು ರಾಜಕೀಯ ಪಕ್ಷಗಳು ಇದುವರೆಗೂ ಈಡೇರಿಸಿಲ್ಲ. ಆದರೂ ಮತದಾರರು ಪ್ರತಿ ಚುನಾವಣೆ ಯಲ್ಲಿ ಮೋಸ ಹೋಗುತ್ತಲೇ ಇದ್ದಾರೆ. ಜನರಲ್ಲಿ ಡೋಂಗಿ ಆಶ್ವಾಸನೆ ನಂಬದಂತೆ ಮಾಡಲು ಇಂತಹ ಆಶ್ವಾಸನೆ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದ್ದೇನೆ ಎನ್ನುತ್ತಾರೆ ಸರವಣನ್.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment