ಆತ್ಮಗೌರವ ಇದ್ದವರು ಯಾರೂ ಸಹ ಕಾಂಗ್ರೆಸ್ಗೆ ವಾಪಸ್ ಹೋಗುವುದಿಲ್ಲ ಎಂದು ಚಿತ್ರದುರ್ಗದಲ್ಲಿ ಬುಧವಾರ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ವಲಸಿಗ ಸಚಿವರು ಕಾಂಗ್ರೆಸ್ಗೆ ವಾಪಸ್ ಆಗುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಈ ವೇಳೆ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಇರುತ್ತಾರೋ ಇಲ್ಲವೋ ಅನುಮಾನವಿದೆ. ಒಂದು ವೇಳೆ ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಆದರೆ ಯಾವುದೇ ಕಾರಣಕ್ಕೂ ವಲಸೆ ಬಂದವರು ಯಾರು ಸಹ ಮರಳಿ ಕಾಂಗ್ರೆಸ್ ಸೇರುವ ಪ್ರಶ್ನೆಯಿಲ್ಲ. ಏಕೆಂದರೆ ಈಗಾಗಲೇ ಕಾಂಗ್ರೆಸ್ನಲ್ಲಿ ಎಲ್ಲವನ್ನೂ ಅನುಭವಿಸಿ ಬಂದಿದ್ದೇವೆ ಎಂದರು.
ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟ ಬಳಿಕ ಏನೆಲ್ಲಾ ಟಾರ್ಚರ್ ನೀಡಿದ್ದಾರೆಂದು ನಾವು ಅನುಭವಿಸಿದ್ದೇವೆ. ಈ ಜೀವನದಲ್ಲಿ ಆ ಮಾನಸಿಕ ಹಿಂಸೆಯನ್ನು ಮರೆಯಲ್ಲ. ಹಾಗೆಯೇ ನಿಜವಾದ ಆತ್ಮಗೌರವ ಇದ್ದವರು ಯಾರೂ ಕೂಡ ಕಾಂಗ್ರೆಸ್ಗೆ ಹೋಗಲ್ಲ. ಜೊತೆಗೆ ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹೋಗುವುದು ಸರಿಯಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು