ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ (72) ಶನಿವಾರ ಮಧ್ಯರಾತ್ರಿ 2 ಘಂಟೆಗೆ ಕೊನೆಯುಸಿರೆಳೆದರು.ಬೆಳಗ್ಗೆ 8 ಗಂಟೆಯಿಂದ ಸತ್ಯಜಿತ್ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಮಧ್ಯಾಹ್ನ 3 ಗಂಟೆಯ ನಂತರ ಹೆಗೆಡೆ ನಗರದ ಖಬರ್ ಸ್ಥಾನ್ದಲ್ಲಿ ಸತ್ಯಜಿತ್ರ ಅಂತ್ಯ ಸಂಸ್ಕಾರ ನಡೆಯಲಿದೆ.
ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಖಳ ನಟ, ಪೋಷಕ ನಟರಾಗಿ ಅಪಾರ ಜನಪ್ರೀಯರಾಗಿದ್ದರು.
ಕಳೆದ 6 ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರದವರೆಗೂ ನಟನ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿತ್ತು.
ಜೊತೆಗೆ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ. ಹೀಗಾಗಿ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು . ಮೊನ್ನೆವರೆಗೂ ಮಾತನಾಡುತ್ತಿದ್ದರು, ಆದರೆ ನಿನ್ನೆಯಿಂದ ಮತ್ತೆ ಆರೋಗ್ಯ ಕ್ಷೀಣಿಸಿತ್ತು.
ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆ ಬಳಿಕ ಮತ್ತೆ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿತ್ತು.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment