Karnataka

ಪತ್ರಕರ್ತ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಹಿರಿಯ ಪತ್ರಕರ್ತ ರಾಮಯ್ಯ ಕರೆ

  • 90 ವಸಂತಕ್ಕೆ ಕಾಲಿರಿಸಿದ ಪಿ.ರಾಮಯ್ಯ ಅವರಿಗೆ ಕೆಯುಡಬ್ಲ್ಯೂಜೆ ಗೌರವ

ಪತ್ರಕರ್ತ ತನ್ನ ವೃತ್ತಿಪರತೆ ಹಾಗೂ ನಿಷ್ಪಕ್ಷಪಾತ ಧೋರಣೆಯಿಂದ ಎತ್ತರಕ್ಕೆ ಬೆಳೆಯಲು ಪ್ರಯತ್ನಿಸುವ ಮೂಲಕ ವೃತ್ತಿ ಗೌರವ ಘನತೆ ಎತ್ತಿ ಹಿಡಿಯುವ ಸ್ವಾಭಿಮಾನಿಯಾಗಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ನ ಮಾಜಿ ಸದಸ್ಯ ಪಿ.ರಾಮಯ್ಯ ಸೋಮವಾರ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 75ನೇ ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ ನ ಮಾಜಿ ಸದಸ್ಯ ಪಿ. ರಾಮಯ್ಯ ಅವರು, ತಮ್ಮ ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ಗೌರವ ಸ್ವೀಕರಿಸಿ ಮಾತನಾಡಿದರು.

ಪತ್ರಕರ್ತರು ವಸ್ತುನಿಷ್ಠರಾಗಬೇಕು, ಜನಪರ ಆಗಬೇಕು ನೇರ ಹಾಗೂ ನಿಷ್ಠುರವಾದಿ ಆದಲ್ಲಿ ಪತ್ರಕರ್ತರಿಗೆ ಸಮಾಜ ಗೌರವಯುತವಾಗಿ ನಡೆಸಿಕೊಳ್ಳುತ್ತದೆ ಎಂದರು. ಪತ್ರಕರ್ತ ಎಂದಾಕ್ಷಣ ಜನರಲ್ಲಿ ಮೂಡುತ್ತಿದ್ದ ವಿಶ್ವಾಸ ಕುಂದುತ್ತದೆ ಎಂಬ ಆತಂಕ ಪತ್ರಿಕಾ ವಲಯದಲ್ಲಿ ಆರಂಭವಾಗಿದ್ದು ಅದನ್ನು ಸವಾಲಾಗಿ ಸ್ವೀಕರಿಸಿ ಯುವ ಪತ್ರಕರ್ತರು ಯಾರದ್ದೇ ಮುಂದೆ ಕೈ ಚಾಚದೆ, ಪತ್ರಿಕಾ ಧರ್ಮದ ಮೌಲ್ಯಗಳನ್ನು ಎತ್ತಿ ಹಿಡಿದು, ಜನ ಕಾಳಜಿಯೊಂದಿಗೆ ಮುಂದುವರೆಯುವ ಮೂಲಕ ನಮ್ಮ ವೃತ್ತಿ ಧರ್ಮದ ಮಾರ್ಗವನ್ನು ಮಾದರಿ ಆಗಿಸಬೇಕು ಎಂದು ರಾಮಯ್ಯ ಕರೆ ನೀಡಿದರು.

ಪ್ರಾಸ್ತಾವಿಕ ವಾಗಿ ಮಾತನಾಡಿದ ಕೆಯುಡಬ್ಲ್ಯೂಜೆ ಶಿವಾನಂದ ತಗಡೂರು, ಇಡೀ ಪತ್ರಿಕೋದ್ಯಮಕ್ಕೆ ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರು ಮಾದರಿ ಆಗಿದ್ದಾರೆ, 50 ವರ್ಷಗಳ ಕಾಲ ದಿ ಹಿಂದೂ ಪತ್ರಿಕೆಯಲ್ಲಿ ಸಲ್ಲಿಸಿದ ಸೇವೆ ಅನನ್ಯ. ಅವರ ಆದರ್ಶಗಳು ಇಂದಿನ ಪೀಳಿಗೆಗೆ ಮಾದರಿ ಆಗಿವೆ ಎಂದರು.

ನಾಗಮಂಗಲ ತಾಲ್ಲೂಕಿನ ಬ್ಯಾಡರಹಳ್ಳಿ ಎಂಬ ಕುಗ್ರಾಮದ ರೈತ ಕುಟುಂಬದಿಂದ ಬಂದ ರಾಮಯ್ಯ ಐವತ್ತರ ದಶಕದಲ್ಲಿಯೇ ಆಂಗ್ಲ ಪತ್ರಕರ್ತರಾಗಿ ರೂಪುಗೊಂಡಿದ್ದಲ್ಲದೆ, ಕನ್ನಡದ ಬಗ್ಗೆ ಅಪಾರ ಬದ್ಧತೆಯನ್ನು ಇಟ್ಟುಕೊಂಡು ನೂರಾರು ಪತ್ರಕರ್ತರ ಬೆಳವಣಿಗೆಗೆ ಕಾರಣರಾಗಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ಯುವ ಪತ್ರಕರ್ತರನ್ನು ಬೆಳಸುವದರೊಂದಿಗೆ, ನಮ್ಮ ಅತ್ಯಂತ ಹಿರಿಯ ಪತ್ರಕರ್ತರನ್ನು ನೆನಪಿಸಿ ಅವರಿಗೆ ಗೌರವಿಸುವ ಕಾರ್ಯವನ್ನು ಸ್ವಾತಂತ್ರದ ಅಮೃತ ಮಹೋತ್ಸವ ನಿಮಿತ್ತ ಸಂಘ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಅವರು ಮಾತನಾಡಿ, ರಾಮಯ್ಯ ಅವರು ಪತ್ರಕರ್ತರಾಗಿ ಸವೆಸಿದ ಹಾದಿ, ಸಲ್ಲಿಸಿದ ಸೇವೆ ಸ್ಮರಣೀಯ. ಸಣ್ಣ ಪತ್ರಿಕೆಗಳ ಅಧ್ಯಯನ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಮಟ್ಟದ ಪತ್ರಿಕೆಗಳ ಬಲವರ್ಧನೆ ಮಾಡಲು ಸರ್ಕಾರಕ್ಕೆ ವರದಿ ನೀಡುವ ಮೂಲಕ ಸಣ್ಣ ಪತ್ರಿಕೆಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದರು. ಇದನ್ನು ಓದಿ : ನಟ ರಮೇಶ್ ಅರವಿಂದ್ ಸೇರಿ ಮೂವರು ಗಣ್ಯರಿಗೆ ರಾಣಿ ಚನ್ನಮ್ಮ ವಿ ವಿಯಿಂದ ಗೌರವ ಡಾಕ್ಟರೇಟ್

15 ಮುಖ್ಯಮಂತ್ರಿಗಳನ್ನು ಹತ್ತಿರದಲ್ಲೇ ಗಮನಿಸಿ, ಅವರ ಒಡನಾಟ ಇಟ್ಟುಕೊಂಡು, ಅವರ ಪ್ರಭಾವಕ್ಕೆ ಒಳಗಾಗದೆ ಪತ್ರಕರ್ತರಾಗಿ ಕೆಲಸ ಮಾಡಿದ ರಾಮಯ್ಯ ಅವರದು ಅಪರೂಪದ ವ್ಯಕ್ತಿತ್ವ ಎಂದು ಶ್ಲಾಘಿಸಿದರು.

ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಕರ್ನಾಟಕ ಲೋಕ ಸೇವಾ ಆಯೋಗ ಮಾಜಿ ಅಧ್ಯಕ್ಷ ಡಾ. ಕೃಷ್ಣ, ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ದಿನೇಶ್, ಬೆಂಗಳೂರು ನಗರ ಘಟಕದ ಸೋಮಶೇಖರ್ ಗಾಂಧಿ, ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ, ಬೀದರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕುಮಾರ ಕಾರಂಜಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಅಪ್ಪಾರಾವ್ ಸೌದಿ, ಪೋಟೋ ಜರ್ನಲಿಸ್ಟ್ ಶರಣ ಬಸಪ್ಪ ಸೇರಿದಂತೆ ಇತರರಿದ್ದರು.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024