ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ರಾತ್ರಿ 8 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಾಲ್ವರು ಪುತ್ರರು ಸೇರಿದಂತೆ ಅಪಾರ ಸಾಹಿತ್ಯ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು
ಚಂದ್ರಗಿರಿ ತೀರದಲ್ಲಿ ಕಾದಂಬರಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಸಹನಾ, ವಜ್ರಗಳು, ಸುಳಿಯಲಿ ಸಿಕ್ಕವರು, ಇಳಿಜಾರು, ಚಪ್ಪಲಿಗಳು, ಖೆಡ್ಡ, ಗಗನ ಸಖಿ ಇವರ ಮಹತ್ವದ ಕೃತಿಗಳು.
ಸಾರಾ ಅಬೂಬಕ್ಕರ್ ಹುಟ್ಟಿದ್ದು 30 ಜೂನ್ 1936ರ ಕಾಸರಗೋಡಿನ ಚಂದ್ರಗಿರಿಯಲ್ಲಿ. ತಂದೆ ವಕೀಲರು. ಅವರು ನ್ಯಾಯದ ಪರವಾಗಿ ಹೋರಾಡುತ್ತಿದ್ದ ರೀತಿಯೇ ಸಾರಾ ಅವರನ್ನು ಪ್ರೇರೇಪಿಸಿತ್ತು. ಹಾಗಾಗಿ ಅನೇಕ ಹೋರಾಟಗಳಲ್ಲಿ ಅವರು ಭಾಗಿಯಾಗಿದ್ದರು. ಸಣ್ಣವಯಸ್ಸಿನಲ್ಲೇ ಬರೆಯುವುದಕ್ಕೆ ಶುರು ಮಾಡಿದವರು. ಈವರೆಗೂ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಅದರಲ್ಲಿ ಕಾದಂಬರಿಗಳ ಸಂಖ್ಯೆಯೇ ದೊಡ್ಡದಿದೆ. ಅದರಲ್ಲೂ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ವಿಚಾರದಲ್ಲಿ ಸೌದಿಯ ‘ವಹಾಬಿಸಂ’ ವಿರುದ್ಧ ಮಾತನಾಡಿ, ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದ್ದರು.
ಸಾರಾ ಅಬೂಬಕ್ಕರ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದಾನ ಚಿಂತಾಮಣಿ ಸತ್ತಿಮಬ್ಬೆ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಸಂದಿವೆ. ವಜ್ರಗಳು, ಅಮ್ಮಚ್ಚಿ ಎಂಬ ನೆನಪು ಸೇರಿದಂತೆ ಹಲವು ಕೃತಿಗಳು ಸಿನಿಮಾವಾಗಿವೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment