ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ ಮಾಡುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಭರವಸೆ ನೀಡಿದ್ದಾರೆ.
ಮುಂದಿನ ಬುಧವಾರದಿಂದ ಪೀಠ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಹೊಂದಿಕೊಂಡಂತೆ ಕೋರ್ಟ್ ಹಲವು ಗಣಿಗಾರಿಕೆ ಕಂಪನಿಗಳನ್ನು ಬಂದ್ ಮಾಡಲಾಗಿದೆ.
ಇದರಿಂದ ಹಲವು ಸಮಸ್ಯೆಗಳಾಗಿದ್ದು, ಆ ಭಾಗದ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಹಿರಿಯ ವಕೀಲ ದುಷ್ಯತ್ ದವ್ ಕೋರ್ಟ್ ಗಮನಕ್ಕೆ ತಂದರು.
ಇದೇ ವೇಳೆ ಮಧ್ಯಪ್ರವೇಶ ಮಾಡಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕ ಸರ್ಕಾರದ ಅರ್ಜಿಯನ್ನು ಉಲ್ಲೇಖಿಸಿದರು. ಕರ್ನಾಟಕದ ಗಣಿಗಾರಿಕೆಗೆ ಸಂಬಂಧಿಸಿದ ಹಲವು ಅರ್ಜಿಗಳು ಬಾಕಿ ಉಳಿದಿವೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಶೀಘ್ರದಲ್ಲಿದಲ್ಲಿ ಪೀಠ ರಚನೆ ಮಾಡಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ, ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು