ಕಳೆದ ರಾತ್ರಿ ಅಫ್ಘಾನಿಸ್ತಾನದಲ್ಲಿ ಉಗ್ರರು ನಡೆಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಅಮೇರಿಕಾದ 13 ಮಂದಿ ಸೈನಿಕರೂ ಸೇರಿ 73 ಮಂದಿ ಬಲಿಯಾಗಿದ್ದಾರೆ.
ಕಾಬೂಲ್ ಏರ್ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತಲೇ ಇವೆ. ಇಲ್ಲಿಯವರೆಗೂ ಒಟ್ಟು 6 ಕಡೆ ಬಾಂಬ್ ಸ್ಫೋಟಗೊಂಡಿದೆ ಎಂಬ ಮಾಹಿತಿ ಇದೆ.
ಈ ಭೀಕರ ದಾಳಿಯಲ್ಲಿ ಒಟ್ಟು 73ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 130ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ಅಧಿಕೃತ ಮಾಹಿತಿ.
ಆದರೆ 300ಕ್ಕೂ ಅಧಿಕ ಮಂದಿ ಸರಣಿ ಸ್ಫೋಟದಲ್ಲಿ ಮೃತರಾಗಿದ್ದಾರೆ ಅಂತಾ ಅಫ್ಘಾನ್ನಲ್ಲಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕಾ ಸೇನೆಯ ಒಟ್ಟು 13 ಸೈನಿಕರು ಈ ಭೀಬತ್ಸ ಸ್ಫೋಟದಲ್ಲಿ ಜೀವ ತೆತ್ತಿದ್ದಾರೆ. ಇನ್ನು, 15 ಮಂದಿ ಯುಎಸ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬೆನ್ನಲ್ಲೇ ಕಾಬೂಲ್ನಲ್ಲಿ ಅಮೆರಿಕ ಸೆಕ್ಯುರಿಟ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಮೆರಿಕನ್ನರು ಯಾರೂ ಏರ್ಪೋರ್ಟ್ ಬಳಿ ಬರಬೇಡಿ ಎಂದು ಸೂಚನೆ ನೀಡಲಾಗಿದೆ.
ಅಮೇರಿಕಾ ಎಚ್ಚರಿಕೆ :
ನೀವು ಎಲ್ಲಿದ್ದರೂ ಹುಡುಕಿ ನಿಮ್ಮನ್ನು ಹೊಡೆಯುತ್ತೇವೆ. ಬೆಲೆ ತೆತ್ತುವಂತೆ ಮಾಡ್ತೇವೆ ಎಂದು ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಉಗ್ರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಆಫ್ಘಾನಿಸ್ತಾನದ ಕಾಬೂಲ್ನಲ್ಲಿ ನಡೆದ ಸರಣಿ ಸ್ಫೋಟಗಳಲ್ಲಿ ಅಮೆರಿಕದ 13 ಸೈನಿಕರು ಸೇರಿ ಒಟ್ಟು 73 ಮಂದಿ ಸಾವನ್ನಪ್ಪಿದ್ದಾರೆ ಎಂಬ ವರದಿ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪತ್ರಿಕಾಗೋಷ್ಠಿಯಲ್ಲಿ ಈ ಕೃತ್ಯ ಎಸಗಿದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಈ ದುಷ್ಕೃತ್ಯವನ್ನ ನಾವು ಎಂದಿಗೂ ಮರೆಯುವುದಿಲ್ಲ.. ಈ ದುಷ್ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ. ಘಟನೆಯ ಹಿಂದಿರುವವರನ್ನು ನಾವು ಕ್ಷಮಿಸುವುದಿಲ್ಲ.. ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಹೇಳಿದ್ದಾರೆ.
ಈ ದಾಳಿಯಲ್ಲಿ ಹುತಾತ್ಮರಾದ ಅಮೆರಿಕ ಸೈನಿಕರು ವೀರರು. ದಾಳಿ ನಂತರವೂ ಸ್ಥಳಾಂತರ ಕಾರ್ಯ ಮುಂದುವರೆಯುತ್ತದೆ. ನೀವು ಎಲ್ಲಿದ್ದರೂ ಬಿಡುವುದಿಲ್ಲ.. ಹುಡುಕಿ ಹೊಡೆಯುತ್ತೇವೆ.. ಈ ಕೃತ್ಯಕ್ಕೆ ಬೆಲೆ ಕಟ್ಟುವಂತೆ ಮಾಡುತ್ತೇವೆ. ಈವರೆಗೆ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ಸ್ ಕೈ ಜೋಡಿಸಿ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ಜೋ ಬೈಡನ್ ಹೇಳಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment