ಸಂಕೇನಹಳ್ಳಿ ಸಮೀಪದ ತರಳಬಾಳು ವಿದ್ಯಾಸಂಸ್ಥೆಗೆ ಸೇರಿದ ಶಿವನಂಜುಂಡೇಶ್ವರ ಶಾಲೆಯ ಮುಖ್ಯ ಶಿಕ್ಷಕ ನರೇಂದ್ರ, ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪದೇ ಪದೇ ತನ್ನ ಕಚೇರಿಗೆ ಕರೆದು ಕಸ ಗುಡಿಸುವಂತೆ ಹೇಳುತ್ತಿದ್ದ. ಅಲ್ಲದೇ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದ.FSL ವರದಿಯಲ್ಲಿ ಚಂದ್ರು ಸಾವಿನ ಸ್ಫೋಟಕ ಸತ್ಯ: ಕೊಲೆ ಅಲ್ಲ ಎಂಬುದು ಅಷ್ಟೇ ನಿಜ ?
ನ. 7 ರಂದು ಅರ್ಧ ವಾರ್ಷಿಕ ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿನಿಯನ್ನು ತನ್ನ ಕಚೇರಿಗೆ ಕರೆದು ಕೈ ಹಿಡಿದು ಅಸಭ್ಯವಾಗಿ ವರ್ತಿಸಲು ಮುಂದಾಗಿದ್ದ ಎನ್ನಲಾಗಿದೆ.
ವಿದ್ಯಾರ್ಥಿನಿ ಮುಜುಗರ ಹಾಗೂ ಹೆದರಿಕೆಯಿಂದ ಈ ವಿಷಯವನ್ನುಯಾರಿಗೂ ತಿಳಿಸಿರಲಿಲ್ಲ. ಈ ವಿಚಾರ ಕೆಲ ಸಹಪಾಠಿಗಳಿಗೆ ಗೊತ್ತಾದ ಬಳಿಕ ವಿದ್ಯಾರ್ಥಿನಿ ತನ್ನ ತಾಯಿ ಹಾಗೂ ದೊಡ್ಡಪ್ಪನ ಮಗನಿಗೆ ವಿಷಯ ತಿಳಿಸಿದ್ದಾಳೆ. ನವೆಂಬರ್ 10 ರಂದು ವಿದ್ಯಾರ್ಥಿನಿ ಪೋಷಕರು ಈ ಸಂಬಂಧ ಮುಖ್ಯಶಿಕ್ಷಕನನ್ನು ವಿಚಾರಿಸಿ ಪೊಲೀಸ್ ಠಾಣೆಗೆ ಕರೆದಿದ್ದಾರೆ. ಪೊಲೀಸ್ ಠಾಣೆಗೆ ಬರಲು ಒಪ್ಪದಿದ್ದಾಗ ಆತನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರು ರಕ್ಷಣೆ ನೀಡಿ ಆತನನ್ನು ಠಾಣೆಗೆ ಕರೆದುಕೊಂಡು ಹೋದರು
ನಂತರ ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಶಿವನಂಜುಂಡೇಶ್ವರ ವಿದ್ಯಾ ಸಂಸ್ಥೆಯು ಮುಖ್ಯಶಿಕ್ಷಕ ನರೇಂದ್ರನನ್ನು ಅಮಾನತು ಮಾಡಲು ಮುಂದಾಗಿದೆ ಎಂದು ಯಲಹಂಕ ತರಳಬಾಳು ವಿದ್ಯಾಸಂಸ್ಥೆ ಅಧ್ಯಕ್ಷ ಪಂಚಾಕ್ಷರಯ್ಯ ತಿಳಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment