Categories: Main News

ಶಂಕರ್ ಬಿದರಿ ಇ- ಮೇಲ್ ಹ್ಯಾಕ್ ಮಾಡಿದ್ದ ಮೂವರ ಬಂಧನ

ನಿವೃತ್ತ ಡಿಜಿ-ಐಜಿಪಿ ಶಂಕರ್​ ಬಿದರಿ ಇ-ಮೇಲ್​ ಐಡಿ ಹ್ಯಾಕ್ ಮಾಡಿ  25 ಸಾವಿರ ರು ಕಿತ್ತುಕೊಂಡಿದ್ದ ಮೂವರು ಹ್ಯಾಕರ್​ಗಳನ್ನು ಬಂಧಿಸುವಲ್ಲಿ ಸೈಬರ್​ ಪೊಲೀಸರು ಯಶಸ್ವಿಯಾಗಿದ್ದಾರೆ.

ಥಿಯಾ, ಸೆರೋಪಾ ಹಾಗೂ ಇಸ್ಟರ್​​ ಕೊನ್ಯಾಕ​ ಬಂಧಿತ ಆರೋಪಿಗಳು.

ನಾಗಾಲ್ಯಾಂಡ್​ ಮೂಲದ ಈ ಆರೋಪಿ ಗಳು ​ನವೆಂಬರ್​ನಿಂದ ಇತ್ತೀಚೆಗೆ 60 ಬ್ಯಾಂಕ್​ ಅಕೌಂಟ್​ಗಳನ್ನು ತೆರೆದಿದ್ದರು.

ನಾಗಾಲ್ಯಾಂಡ್​ನ ನಿರುದ್ಯೋಗಿ ಯುವಕರಿಗೆ ಹಣದ ಆಮಿಷವೊಡ್ಡಿ ಆಧಾರ್​ ಕಾರ್ಡ್​, ಮನೆ ಬಾಡಿಗೆ ಪತ್ರಗಳನ್ನ ಪಡೆದುಕೊಳ್ಳುತ್ತಿದ್ದರು. ಅದನ್ನು ಬಳಸಿ ಈ ಅಕೌಂಟ್ಸ್​ಗಳನ್ನು ತೆರೆದಿದ್ದರು ಎನ್ನಲಾಗಿದೆ.

ಕಳೆದ ಫೆಬ್ರವರಿಯಲ್ಲಿ ನಿವೃತ್ತ ಐಪಿಎಸ್​ ಅಧಿಕಾರಿ ಶಂಕರ್​ ಬಿದರಿ ಇ-ಮೇಲ್​ ಐಡಿಯನ್ನು ಹ್ಯಾಕ್​ ಮಾಡಿದ್ದರು. ಈ ಮೂಲಕ ಬಿದರಿ ಸ್ನೇಹಿತರಿಗೆ ಮೆಸೇಜ್​ ಮಾಡಿ 25,000 ರು ಕಿತ್ತುಕೊಂಡಿದ್ದರು.

ಈ ಕುರಿತಂತೆ ಶಂಕರ್​ ಬಿದರಿಯವರು ಆಗ್ನೇಯ ವಿಭಾಗದ ಸೈಬರ್​ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಂಧಿತರಿಂದ 13 ಪ್ಯಾನ್​ ಕಾರ್ಡ್​, 6 ಆಧಾರ್​ ಕಾರ್ಡ್​, 2 ಎಟಿಎಂ, 2‌ ಮೊಬೈಲ್​ಗಳನ್ನ  ವಶಕ್ಕೆ ಪಡೆದಿದ್ದಾರೆ. ಸುಮಾರು 20 ಬ್ಯಾಂಕ್​ ಅಕೌಂಟ್​ಗಳಿಂದ 2ಲಕ್ಷ ರೂಪಾಯಿಯನ್ನ ಜಪ್ತಿ ಮಾಡಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024