ನಿವೃತ್ತ ಡಿಜಿ-ಐಜಿಪಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ ಮಾಡಿ 25 ಸಾವಿರ ರು ಕಿತ್ತುಕೊಂಡಿದ್ದ ಮೂವರು ಹ್ಯಾಕರ್ಗಳನ್ನು ಬಂಧಿಸುವಲ್ಲಿ ಸೈಬರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಥಿಯಾ, ಸೆರೋಪಾ ಹಾಗೂ ಇಸ್ಟರ್ ಕೊನ್ಯಾಕ ಬಂಧಿತ ಆರೋಪಿಗಳು.
ನಾಗಾಲ್ಯಾಂಡ್ ಮೂಲದ ಈ ಆರೋಪಿ ಗಳು ನವೆಂಬರ್ನಿಂದ ಇತ್ತೀಚೆಗೆ 60 ಬ್ಯಾಂಕ್ ಅಕೌಂಟ್ಗಳನ್ನು ತೆರೆದಿದ್ದರು.
ನಾಗಾಲ್ಯಾಂಡ್ನ ನಿರುದ್ಯೋಗಿ ಯುವಕರಿಗೆ ಹಣದ ಆಮಿಷವೊಡ್ಡಿ ಆಧಾರ್ ಕಾರ್ಡ್, ಮನೆ ಬಾಡಿಗೆ ಪತ್ರಗಳನ್ನ ಪಡೆದುಕೊಳ್ಳುತ್ತಿದ್ದರು. ಅದನ್ನು ಬಳಸಿ ಈ ಅಕೌಂಟ್ಸ್ಗಳನ್ನು ತೆರೆದಿದ್ದರು ಎನ್ನಲಾಗಿದೆ.
ಕಳೆದ ಫೆಬ್ರವರಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಇ-ಮೇಲ್ ಐಡಿಯನ್ನು ಹ್ಯಾಕ್ ಮಾಡಿದ್ದರು. ಈ ಮೂಲಕ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ 25,000 ರು ಕಿತ್ತುಕೊಂಡಿದ್ದರು.
ಈ ಕುರಿತಂತೆ ಶಂಕರ್ ಬಿದರಿಯವರು ಆಗ್ನೇಯ ವಿಭಾಗದ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 13 ಪ್ಯಾನ್ ಕಾರ್ಡ್, 6 ಆಧಾರ್ ಕಾರ್ಡ್, 2 ಎಟಿಎಂ, 2 ಮೊಬೈಲ್ಗಳನ್ನ ವಶಕ್ಕೆ ಪಡೆದಿದ್ದಾರೆ. ಸುಮಾರು 20 ಬ್ಯಾಂಕ್ ಅಕೌಂಟ್ಗಳಿಂದ 2ಲಕ್ಷ ರೂಪಾಯಿಯನ್ನ ಜಪ್ತಿ ಮಾಡಲಾಗಿದೆ.
ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
This website uses cookies.
Leave a Comment