ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿವಿಗೆ ಶಂಕರಾಚಾರ್ಯರ ಹೆಸರು ಸೂಕ್ತ: ಸಚಿವೆ ಶೋಭಾ

Team Newsnap
1 Min Read

ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯಕ್ಕೆ ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯರ ಹೆಸರು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೈಗಡಿಗ್ರಾಮದಲ್ಲಿ ವರದಿಗಾರೊಂದಿಗೆ ಮಾತನಾಡಿದ ಸಚಿವೆ ಶೋಭಾ ಈ ಕ್ಯಾಂಪಸ್‌ ಗೆ ರಾಜೀವ್ ಗಾಂಧಿ ಹೆಸರು ಇದೆ. ಅದನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ಇಡಬೇಕು ಎಂಬ ಬೇಡಿಕೆ ಇದೆ ಎಂದರು.

ಹೆಸರು ಬದಲಾವಣೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಈ ಬಗ್ಗೆ ಪರಿಶೀಲನೆ ಮಾಡಲು ಒತ್ತಡ ಹಾಕುವುದಾಗಿ ಶೋಭಾ ಭರವಸೆ ನೀಡಿದರು.

ಸೆಪ್ಟೆಂಬರ್ 22 ರಂದು ಕೃಷಿ ರಫ್ತುದಾರರ ಸಮಾವೇಶ ಏರ್ಪಡಿಸಲಾಗಿದೆ. ಇಲ್ಲಿ ಕೃಷಿಗೆ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದೂ ಇದೇ ವೇಳೆ ತಿಳಿಸಿದರು.

ದೇಗುಲ ತೆರವು ಸಂಬಂಧ ಪ್ರತಿಕ್ರಿಯೆ ನೀಡಿ, ದೇವಾಲಯಗಳನ್ನು ಒಡೆಯುವ ಮೊದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆ ದೇಗುಲಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದರು.

Share This Article
Leave a comment