ಮತ್ತೆ ಬಿ. ಶರತ್ ಅವರನ್ನೇ ಮೈಸೂರು ಡಿ ಸಿ ಯಾಗಿ ಮರು ನೇಮಕ ಮಾಡಿ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ ಮಹತ್ವದ ತೀರ್ಪು ನೀಡಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಅವರನ್ನು ಕೇವಲ 29 ದಿನದಲ್ಲಿ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿಯವರನ್ನು ಡಿಸಿ ಆಗಿ ನೇಮಕ ಮಾಡಿದ ಸರ್ಕಾರದ ನಿರ್ಧಾರ ಈಗ ಮುಖಭಂಗವಾಗಿದೆ.
ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆ ಯಾದಂತಾಗಿದೆ
ಡಿಸೆಂಬರ್ 22 ರೊಳಗೆ ಈ ಸಂಬಂಧ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ತಿಳಿಸಲು ಅಡ್ವೊಕೇಟ್ ಜನರಲ್ ಗೆ ಸಿಎಟಿ ನಿರ್ದೇಶನ ನೀಡಿದೆ.
ತಮ್ಮ ಆದೇಶವನ್ನು ಪಾಲಿಸದೇ ಹೋದರೆ ಡಿಸೆಂಬರ್ 22 ರಂದು ಸಿಎಟಿಯೇ ಈ ಬಗ್ಗೆ ಆದೇಶ ಹೊರಡಿಸಬೇಕಾಗುತ್ತದೆ ಎಂಬ ಎಚ್ಚರಿಕೆಯ ನಿರ್ದೇಶನವನ್ನೂ ಸಹ ನೀಡಿದೆ.
ಬಿ ಶರತ್ ತಮ್ಮ ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೊರೆ ಹೋರೆ ಹೋಗಿದ್ದರು. ಅನೇಕ ಬಾರಿ ಸಿಎಟಿ ನ್ಯಾಯಾಲಯವು ರೋಹಿಣಿ ಗೆ ಅನುಕೂಲವಾಗುವಂತೆ ನಡೆದುಕೊಂಡು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕೊನೆಗೆ ಸತ್ಯಕ್ಕೆ ಜಯ ಎಂಬುದು ಸಾಬೀತಾಯಿತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ