ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲುಕೋಟೆ ಬಳಿಯ ಕುಪ್ಪಳ್ಳಿಯಲ್ಲಿ ಜರುಗಿದೆ
ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದ. ಕೃಷ್ಣೇಗೌಡನ ಪತ್ನಿ ನಿವೇದಿತಾ (26) ಎಂಬಾಕೆ, ತಮ್ಮ ಮಕ್ಕಳಾದ ಗಾನವಿ (6), ಉಲ್ಲಾಸ್ (4) ಇಬ್ಬರು ಮಕ್ಕಳೊಡನೆ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ನಲ್ಲಹಳ್ಳಿಯ ನಿವೇದಿತಾರನ್ನು ಕಳೆದ 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು.
ಗಂಡ ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೂ
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ.