ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವುದಾಗಿ ಘೋಷಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದರು.
ಈ ಕುರಿತಂತೆ ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸು ವಿಮಾನ ನಿಲ್ದಾಣವಾಗಿದೆ. ಈ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾನು ವೀಕ್ಷಿಸಿದ್ದೇನೆ. ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಸೇಲೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೇ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.
ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿರುವಂತ ಮಹನೀಯರ ಹೆಸರನ್ನು ಇಡುವಂತೆ ಕೋರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ
ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ