ಶಿವಮೊಗ್ಗ ಹರ್ಷ ಹತ್ಯೆ : ಉಗ್ರ ಸಂಘಟನೆಯ ಕೈವಾಡ – ಎನ್ ಐಎ ಅಧಿಕಾರಿಗಳಿಗೆ ಸಾಕ್ಷ್ಯ

Team Newsnap
1 Min Read

ಶಿವಮೊಗ್ಗದಲ್ಲಿ ಕಳೆದ ಫೆ 20 ರಂದು ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯಲ್ಲಿ ಉಗ್ರ ಸಂಘಟನೆ ಕೈವಾಡ ಇರುವುದು ಎನ್ ಐಎ ತನಿಖಾ ತಂಡಕ್ಕೆ ವಿಚಾರಣೆಯ ವೇಳೆ ಸಾಕ್ಷ್ಯಾಧಾರಗಳು ಸಿಕ್ಕಿವೆ.

ಹರ್ಷ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‍ಐಎ ಅಧಿಕಾರಿಗಳು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದಾಗ ಕೆಲವೊಂದು ಎಲೆಕ್ಟ್ರಾನಿಕ್ ವಸ್ತುಗಳಿಂದ ತಾಂತ್ರಿಕ ಸಾಕ್ಷ್ಯ ಲಭ್ಯವಾಗಿದೆ. ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ಶೀಘ್ರದಲ್ಲೇ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲು ಎನ್‍ಇಎ ಸಿದ್ಧತೆ ನಡೆಸಿದೆ.

ದೋಷಾರೋಪ ಪಟ್ಟಿಯಲ್ಲಿ ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದ ಉಗ್ರ ಸಂಘಟನೆಯ ಹೆಸರನ್ನೂ ಉಲ್ಲೇಖಿಸಲಿದೆ ಎಂದು ಮೂಲಗಳು ಹೇಳಿವೆ

ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಈ ನಡುವೆ ಪ್ರಕರಣವನ್ನು ಸರ್ಕಾರ ಎನ್‍ಐಎಗೆ ತನಿಖೆಗೆ ವರ್ಗಾಹಿಸಿತ್ತು. ಎನ್‍ಐಎ ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಈವರೆಗೆ ಒಟ್ಟು 450 ಹೆಚ್ಚು ಮಂದಿಯನ್ನು ಎನ್‍ಐಎ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆಂಬ ಮಾಹಿತಿ ಇದೆ.

Share This Article
Leave a comment