ಸಚಿವೆ ಶೋಭಾ ಕರಂದ್ಲಾಜೆ ಎದುರು ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದರು. ಇದೇ ವೇಳೆ ನ್ಯಾಯ ದೊರಕಿಸುವ ಭರವಸೆಯನ್ನು ನೀಡಿದರು.ಇದನ್ನು ಓದಿ –ಮುಂಬೈ ನಲ್ಲಿ ಶಿವಸೇನಾ ಸಂಸದ ರಾವತ್ ನಿವಾಸದ ಮೇಲೆ ED ದಾಳಿ
ಬಳಿಕ ಕುಟುಂಬಸ್ಥರಿಗೆ 5 ಲಕ್ಷ ರು ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಪ್ರವೀಣ್ ನೆಟ್ಟಾರು ಸಾವು ನಮಗೆಲ್ಲರಿಗೂ ದುಃಖ ತಂದಿದೆ. ಅಮಾಯಕರ ಸಾವು ನೋವುಂಟು ಮಾಡಿದೆ. ಪ್ರೀತಿಯಿಂದ ಬದುಕುತ್ತಿದ್ದ ಪ್ರವೀಣ್ ಇಂದು ನಮ್ಮೊಂದಿಗೆ ಇಲ್ಲ. ಸಮಸ್ಯೆ ಆದಾಗ ಪ್ರವೀಣ್ ಸ್ಪಂದಿಸುತ್ತಿದ್ದ. ಹತ್ಯೆಯಾದಾಗ ನಾನು ದೆಹಲಿಯಲ್ಲಿ ಇದ್ದೆ. ಕೇರಳ ಮಾದರಿಯಲ್ಲಿ ಪ್ರವೀಣ್ ಕೊಲೆಯನ್ನು ಮಾಡಿದ್ದಾರೆ. NIA ತನಿಖೆಗೆ ನಡೆಸಲು ನೀಡಿದ್ದಾರೆ. ಈ ತನಿಖೆಯಲ್ಲಿ ನಿಜವಾದ ಆರೋಪಿಗಳು ಸಿಗುತ್ತಾರೆ, ಕಠಿಣ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು