ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದಾರೆ.
ಸಚಿವೆ ಶೋಭಾ ಕರಂದ್ಲಾಜೆ ಎದುರು ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದರು. ಇದೇ ವೇಳೆ ನ್ಯಾಯ ದೊರಕಿಸುವ ಭರವಸೆಯನ್ನು ನೀಡಿದರು.ಇದನ್ನು ಓದಿ –ಮುಂಬೈ ನಲ್ಲಿ ಶಿವಸೇನಾ ಸಂಸದ ರಾವತ್ ನಿವಾಸದ ಮೇಲೆ ED ದಾಳಿ
ಬಳಿಕ ಕುಟುಂಬಸ್ಥರಿಗೆ 5 ಲಕ್ಷ ರು ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಪ್ರವೀಣ್ ನೆಟ್ಟಾರು ಸಾವು ನಮಗೆಲ್ಲರಿಗೂ ದುಃಖ ತಂದಿದೆ. ಅಮಾಯಕರ ಸಾವು ನೋವುಂಟು ಮಾಡಿದೆ. ಪ್ರೀತಿಯಿಂದ ಬದುಕುತ್ತಿದ್ದ ಪ್ರವೀಣ್ ಇಂದು ನಮ್ಮೊಂದಿಗೆ ಇಲ್ಲ. ಸಮಸ್ಯೆ ಆದಾಗ ಪ್ರವೀಣ್ ಸ್ಪಂದಿಸುತ್ತಿದ್ದ. ಹತ್ಯೆಯಾದಾಗ ನಾನು ದೆಹಲಿಯಲ್ಲಿ ಇದ್ದೆ. ಕೇರಳ ಮಾದರಿಯಲ್ಲಿ ಪ್ರವೀಣ್ ಕೊಲೆಯನ್ನು ಮಾಡಿದ್ದಾರೆ. NIA ತನಿಖೆಗೆ ನಡೆಸಲು ನೀಡಿದ್ದಾರೆ. ಈ ತನಿಖೆಯಲ್ಲಿ ನಿಜವಾದ ಆರೋಪಿಗಳು ಸಿಗುತ್ತಾರೆ, ಕಠಿಣ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ