ಮುಂದಿನ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ನವೆಂಬರ್ 13 ಕ್ಕೆ ಈ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಆಪ್ತ ಮುಖಂಡರು ಕೂಡ, ನಮ್ಮಲ್ಲಿ ಬನ್ನಿ ಎಂದು ಆಹ್ವಾನ ನೀಡುವ ಮೂಲಕ ಸ್ವತಃ ಸಿದ್ದರಾಮಯ್ಯರಲ್ಲಿ ಗೊಂದಲ ಮೂಡಿಸ್ತಿದ್ದಾರೆ. ಇದು ಹೀಗೆ ಮುಂದುವರೆದರೆ ತಪ್ಪು ಸಂದೇಶ ಹೋಗಬಹುದು ಎಂಬ ಕಾರಣಕ್ಕೆ, ಇದಕ್ಕೆಲ್ಲಾ ಪೂರ್ಣವಿರಾಮ ಇಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ.ಪಂಜಾಬ್ನಲ್ಲಿ ಶಿವಸೇನೆ ನಾಯಕ ಸುಧೀರ್ ಗುಂಡಿಟ್ಟು ಹತ್ಯೆ
ತಾವು ಸ್ಪರ್ಧೆ ಮಾಡಲಿರುವ ಕ್ಷೇತ್ರ ಯಾವುದು ಎಂಬುದನ್ನು ಸಿದ್ದರಾಮಯ್ಯ ನ.13ರಂದು ಪ್ರಕಟ ಮಾಡಬಹುದು ಎಂಬ ವದಂತಿ ಇದೆ. ಕೋಲಾರದ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಕ್ಷೇತ್ರವನ್ನು ಸಿದ್ದರಾಮಯ್ಯ ಘೋಷಣೆ ಮಾಡಬಹುದು ಎನ್ನಲಾಗಿದೆ.
ಟಿಪ್ಪು ಜಯಂತಿ ಮಡಿದ ಕಾರಣಕ್ಕೆ ಸಿದ್ದರಾಮಯ್ಯಗೆ ಕ್ಷೇತ್ರ ಸಿಗ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ. ತಾಕತ್ತಿದ್ದರೆ ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಆಯ್ಕೆಯ ಕ್ಷೇತ್ರಗಳು
ಕ್ಷೇತ್ರ 1 – ವರುಣಾ,
ಕ್ಷೇತ್ರ 2 – ಕೋಲಾರ,
ಕ್ಷೇತ್ರ 3 – ಬಾದಾಮಿ,
ಕ್ಷೇತ್ರ 4 – ಚಾಮರಾಜಪೇಟೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್