ಆದಷ್ಟು ಬೇಗ ಬಿಜೆಪಿ ಸರ್ಕಾರ ಹೋಗುತ್ತದೆ. ನಾನು ಮುಂದಿನ ಮುಖ್ಯಮಂತ್ರಿ ಆಗ್ತೀನಿ ಅಂತಾ ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ. ಭ್ರಮೆಯಲ್ಲಿ ಇದ್ದಾರೆ ಎಂದು ಸಚಿವ ಬಿ. ಸಿ. ಪಾಟೀಲ್ ಲೇವಡಿ ಮಾಡಿದ್ದಾರೆ.
ಹಾನಗಲ್ ತಾಲೂಕಿನಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲನೆ ಮತ್ತು ಕೆರೆಗೆ ಬಾಗಿನ ಅರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುದ್ದಿಗಾರರ ಜೊತೆ ಮಾತನಾಡಿ,
ಸಿದ್ದರಾಮಯ್ಯನವರ ಕನಸು ಅಥವಾ ಡಿ.ಕೆ. ಶಿವಕುಮಾರ್ ಅವರ ಯಾವ ಕನಸುಗಳು ನನಸಾಗೋದಿಲ್ಲ. ಅವರು ಕಾಣ್ತಾ ಇರೋದು ಹಗಲುಗನಸು. ಮತ್ತೆ ಮುಂದಿನ ಬಾರಿ 2023ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಾವೇ ಆಡಳಿತ ನಡೆಸುತ್ತೇವೆ ಎಂದರು.