ಸುಳ್ಳು ಹೇಳುವುದಕ್ಕೆ ನೊಬೆಲ್ ಪ್ರಶಸ್ತಿ ಇಟ್ಟು ಡಿಕೆಶಿ- ಸಿದ್ಧರಾಮಯ್ಯಗೂ ಪಂದ್ಯ ನಡೆದರೆ
ಸಿದ್ದರಾಮಯ್ಯ ಗ್ಯಾರಂಟಿ ಗೆಲ್ಲುತ್ತಾರೆ ಸಚಿವ ಈಶ್ವರಪ್ಪ ಭಾನುವಾರ ಗೇಲಿ ಮಾಡಿದರು.
ಮಂಡ್ಯದಲ್ಲಿ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ , ಕಾಂಗ್ರೆಸ್ಸಿನವರು ದೊಡ್ಡ ಸುಳ್ಳುಗಾರರು. ಅದಕ್ಕೆ ಉದಾಹರಣೆ ಎಂದರೆ ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ಟರು. ಆವಾಗ ಈ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅದು ಮೋದಿದೂ ಎಂದು ಗೇಲಿ ಮಾಡಿದರು.
ಆ ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಗಂಡಸ್ಥನ ಹೋಗಿಬಿಡುತ್ತೆ ಎಂದು ಅಪಪ್ರಚಾರ ಮಾಡಿದರು. ಕೊನೆಗೆ ಜನರೇ ಜಾಗೃತಿಯಾಗಿ ವ್ಯಾಕ್ಸಿನ್ ಹಾಕಿಸಿಕೊಂಡರು.ಆಗ ಇದೇ ಸಿದ್ದು, ಡಿಕೆ ಬೆಂಬಲಿಗರು ಕದ್ದು ಬಂದು ಲಸಿಕೆ ಪಡೆದರು ಎಂದರು .
ಕೊವಿಡ್ ವಿರುದ್ಧ ಹೋರಾಟದಲ್ಲಿ ಭಾರತ ಮೊದಲ ಸ್ಥಾನ.ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನ.
ನೂರು ಕೋಟಿ ಲಸಿಕೆ ಗುರಿಯಾಗಿತ್ತಿದ್ದಂತೆ ಪ್ರಪಂಚ ಮೋದಿಯವರಿಗೆ ಅಭಿನಂದನೆ ಸಲ್ಲಿಸಿತು.ಕಾಂಗ್ರೆಸ್ ನಾಯಕರು ಇವರು ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದರು
ಮೋದಿಯವರನ್ನು ವಿಶ್ವ ನಾಯಕ ಎಂದು ಪ್ರಪಂಚ ಒಪ್ಪಿಕೊಂಡಿದೆ. ಕಾಂಗ್ರೆಸ್ಸಿನವರು ಕೆಟ್ಟ ಪದ ಬಳಸಿ ಏಕವಚನದಲ್ಲಿ ಮೋದಿ ಬಗ್ಗೆ ಮಾತನಾಡುತ್ತಾರೆ. ಇವರುಗಳು ಹಂಗೆ ಹಿಂಗೆ ಸಾಯುವುದಿಲ್ಲ ನೋಡ್ತಾ ಇರಿ ಎಂದು ಈಶ್ವರಪ್ಪ ಕಟುವಾಗಿ ಟೀಕಿಸಿದರು
ಬಡವರು, ಸೈನಿಕರು ಮೋದಿ ಅವರನ್ನು ಮೆಚ್ಚಿದ್ದಾರೆ. ಇವರು ಏಕವಚನದಲ್ಲಿ ಮೋದಿಗೆ ಮಾತನಾಡುತ್ತಾರೆ. ಸುಳ್ಳು ಹೇಳಿ ದೇಶವನ್ನ ದಾರಿ ತಪ್ಪಿಸುತ್ತಿದ್ದಾರೆ. ಇವತ್ತು ದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ದೇವೇಗೌಡರ ರೂಪದಲ್ಲಿ ಪ್ರಾದೇಶಿಕ ಪಕ್ಷವಾಗುತ್ತಿದೆ.
ನಮ್ಮ ವೇದಿಕೆಯಲ್ಲಿ ಕುಳಿತ ಅನೇಕರು ಮೊದಲು ಬಿಜೆಪಿಯಲ್ಲಿರಲಿಲ್ಲ. ದರಿದ್ರ ಕಾಂಗ್ರೆಸ್ಸು ಬೇಡ, ದರಿದ್ರ ಜೆಡಿಎಸ್ ಬೇಡ ಎಂದು ಬಿಜೆಪಿಗೆ ಬಂದಿದ್ದೀರಾ ಎಂದರು.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment