Main News

ಮತಾಂತರದ ವಿರುದ್ದ ಕಠಿಣ ಕ್ರಮ : ಸಿದ್ದರಾಮಯ್ಯ ಹಸಿ‌ ಸುಳ್ಳುಗಾರ – ಸಚಿವ ಅಶೋಕ್

ಮತಾಂತರ ಎಂಬುದು ಹೀನ ಕೃತ್ಯ ,ಬಿಜೆಪಿ ಸರ್ಕಾರ ಮತಾಂತರಕ್ಕೆ ಬ್ರೇಕ್ ಹಾಕುವ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಮಂಡ್ಯದಲ್ಲಿ ಹೇಳಿದರು.‌

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ವ್ಯಕ್ತಿ ಯಾವ ಧರ್ಮದಲ್ಲಿ ಹುಟ್ಟಿರುತ್ತಾರೆ ಆ ಧರ್ಮದಲ್ಲಿ ಪೂಜೆ ಮಾಡುವುದು ಅವರ ಹಕ್ಕು. ವಿದೇಶದಿಂದ ಹಣತಂದು, ಏಜೆಂಟ್ ಗಳ ಮೂಲಕ ಹಣಕೊಟ್ಟು ಮತಾಂತರ ಕ್ಕೆ ಆಮಿಷ ಒಡ್ಡುತ್ತಿದ್ದಾರೆ ಎಂದರು.

ಹಸು, ಎಮ್ಮೆ ಕೊಡುಸ್ತೀನಿ, ಆಸ್ಪತ್ರೆ ಖರ್ಚು‌ ನೋಡ್ಕೊಳ್ತೀನಿ ಅಂತಾ ಲಕ್ಷಾಂತರ ಜನರನ್ನು ಮತಾಂತರ ಮಾಡಲು ಮುಂದಾಗ್ತಿದ್ದಾರೆ.ಇದು ದೊಡ್ಡ ಪಿಡುಗು, ನಮ್ಮ ರಾಜ್ಯದಲ್ಲಿಯೂ ಇದೆ, ಮಂಡ್ಯ ಜಿಲ್ಲೆಯಲ್ಲಿಯೂ ಇದೆ.
ಅಂತಹ ಸಮಾಜಘಾತುಕ, ದೇಶದ್ರೋಹಿ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ತೀವಿ ಎಂದು ಹೇಳಿದರು.

ಒಂದು ಮತಾಂತರಕ್ಕೆ ಇಂತಿಷ್ಟು ಹಣ ಸಿಗಲಿದೆ ಅ ಹಣದ ಆಸೆಗೆ ಮತಾಂತರ ಮಾಡುತ್ತಿರುವ ಸಂಗತಿ ನಮಗೆ ಗೊತ್ತಾಗಿದೆ.ಬಿಜೆಪಿ ಸರ್ಕಾರ ಮತಾಂತರಕ್ಕೆ ಬ್ರೇಕ್ ಹಾಕುವ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೆ.
ಈ ಕೆಲಸವನ್ನು ಕಾಂಗ್ರೇಸ್ ಸರ್ಕಾರ ಬಂದ್ರೆ ಮಾಡಲ್ಲ, ನಮ್ಮ ಸರ್ಕಾರ ಮಾಡಿ ತೋರಿಸು ತ್ತದೆ ಎಂದರು.

ಸಿದ್ದರಾಮಯ್ಯ ಬುರುಡೆ :

ಮಾಜಿ ಸಿಎಂ ಸಿದ್ದರಾಮಯ್ಯ ಬುರುಡೆ ಬಿಡುವುದರಲ್ಲಿ ನಂಬರ್ ಓನ್. ಅವರು ಇದ್ದಾಗ ಏಳು ಕೆಜಿ ಅಕ್ಕಿ ಕೊಡಲೇ ಇಲ್ಲ. ಈ ಕುಮಾರಸ್ವಾಮಿಯವರು ಹೇಳಿದ್ದಾರೆ ಹಣ ಮೀಸಲಿಡದೆ 7 ಕೆಜಿ ಕೊಡ್ತೀವಿ ಅಂತಾ ಬುರಡೆ ಬಿಟ್ರು ಎಂದರು ಅಶೋಕ್.

ಸಿದ್ದರಾಮಯ್ಯ ಅವಧಿಯಲ್ಲಿ ಜಾತಿ ಗಣತಿ ಮಾಡ್ತೀವಿಅಂತಾ 180 ಕೋಟಿ ಕೊಟ್ಟರು. ಜಾತಿ ಗಣತಿ ಮಾಡಲು ಎಷ್ಟುದಿನ ಬೇಕು?..
ವರದಿ‌ ಸಿದ್ದವಾದ್ರು ಬಿಡುಗಡೆ ಮಾಡೋ ಧೈರ್ಯ ಯಾಕೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಏನೇ ಹೇಳಿದರು ಅದು ಸುಳ್ಳು. ಸುಳ್ಳು ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಸುಳ್ಳು. ಎಂದು ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದರು ಕಂದಾಯ ಸಚಿವ ಆರ್.ಅಶೋಕ್.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024