Trending

ಗೊಂದಲದಿಂದ ಹೊರ ಬರದ ಸಿದ್ದು: ಪತ್ನಿ , ಪುತ್ರನ ಸಲಹೆಗಳೇ ವಿಭಿನ್ನ

ಕ್ಷೇತ್ರ ಆಯ್ಕೆಯ ಗೊಂದಲದಲ್ಲಿರುವ ಸಿದ್ದರಾಮಯ್ಯ ಪರಿಹಾರ ಹುಡುಕಲು ಇದೇ ಮೊದಲ ಬಾರಿಗೆ ಕುಟುಂಬಸ್ಥರ ಮೊರೆ ಹೋದರೂ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ

ಪತ್ನಿ ಪಾರ್ವತಿ ಹಾಗೂ ಪುತ್ರ ಡಾ ಯತೀಂದ್ರರ ಅಭಿಪ್ರಾಯ ಮತ್ತು ವಿಭಿನ್ನ ಸಲಹೆಗಳು ಸಿದ್ದರಾಮಯ್ಯರನ್ನು ಮತ್ತಷ್ಟು ಗೊಂದಲಕ್ಕೆ ತಳ್ಳಿದೆ. ಮಂಡ್ಯದ ಸ್ಪೋರ್ಟ್ಸ್ ಕ್ಲಬ್ ಮೇಲೆ ಧಾಳಿ : ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧನ – 18 ಲಕ್ಷ ವಶ

ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಬೇಡಿ. ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿ ಎಂದು ಪತ್ನಿ ಸಲಹೆ ಕೊಟ್ಟಿದ್ದರಂತೆ ಆದರೆ ಈ ಸಲಹೆ ಪರಿಗಣಿಸದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ನಿಂತು ಸೋಲನ್ನು ಅನುಭವಿಸಿದ್ದರು. 

ಪಾರ್ವತಿ ಹೇಳಿರುವುದು ಏನು?

ವರುಣಾಗೆ ಹೋಗಿ ಮಗನ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಮಗನ ರಾಜಕೀಯ ಭವಿಷ್ಯ ಒಮ್ಮೆ ಬಿದ್ದರೆ ಮತ್ತೆ ಏಳುವುದು ಕಷ್ಟವಾಗುತ್ತದೆ. ಹೀಗಾಗಿ ವರುಣಾದಲ್ಲಿ ಮಗನನ್ನು ಗೆಲ್ಲಿಸಿ ಒಂದು ಅವಧಿಗೆ ಮಂತ್ರಿ ಮಾಡಿ. ನೀವು ಕೋಲಾರಕ್ಕೆ ಹೋದರೆ ಗೆಲ್ಲಬಹುದು ಎಂದು ಪತ್ನಿ ಪಾರ್ವತಿ ಸಲಹೆ ನೀಡಿದ್ದಾರೆ.

ಯತೀಂದ್ರ ಹೇಳಿದ್ದೇ ಬೇರೆ:

ಕೋಲಾರದಲ್ಲಿ ಹೇಳಿದಷ್ಟು ಗೆಲುವು ಸುಲಭ ಇಲ್ಲ. ಕೊನೆಯ ಚುನಾವಣೆಯಲ್ಲಿ ವಿಪರೀತ ರಿಸ್ಕ್‌ ತೆಗೆದುಕೊಳ್ಳುವುದು ಬೇಡ. ವರುಣಾ ಕ್ಷೇತ್ರದಲ್ಲಿ ಸುಲಭವಾಗಿ ಗೆಲ್ಲಬಹುದು. ನಾನು ಬೇರೆ ಎಲ್ಲಿಯೂ ಸ್ಪರ್ಧೆ ಮಾಡುವುದಿಲ್ಲ ನಿಮ್ಮನ್ನು ಗೆಲ್ಲಿಸಿಕೊಡುತ್ತೇನೆ ಎಂದು ಪುತ್ರ ಯತೀಂದ್ರ ಹೇಳಿದ್ದಾರಂತೆ

ಸಿದ್ದು ಏನಂತಾರೆ?

ಕೋಲಾರದಲ್ಲಿ ರಿಸ್ಕ್‌ ಜಾಸ್ತಿ ಎಂಬ ಹಿರಿಯ ನಾಯಕರು, ಕಾಂಗ್ರೆಸ್‌ ಹೈಕಮಾಂಡ್‌ ಅಭಿಪ್ರಾಯಕ್ಕೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.

ವರುಣಾದಿಂದ ಸ್ಪರ್ಧಿಸುವ ಆಸೆ ಇದ್ದರೂ ಇದಕ್ಕೆ ಪುತ್ರ ವ್ಯಾಮೋಹ ಅಡ್ಡಿಯಾಗುತ್ತಿದೆ. ನಾನು ಸ್ಪರ್ಧಿಸಿದರೆ ಪುತ್ರ ಯತೀಂದ್ರ ರಾಜಕೀಯ ಜೀವನಕ್ಕೆ ಅಡ್ಡಿಯಾಗಬಹದು ಎಂಬ ಭೀತಿ ಕಾಡುತ್ತಿದೆ. ಈ ಕಾರಣಕ್ಕೆ ಇನ್ನೂ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಗೊಂದಲದಿಂದ ಇನ್ನೂ ಹೊರ ಬಂದಿಲ್ಲ

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024