March 12, 2026

Newsnap Kannada

The World at your finger tips!

somshekar1

ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು: ಸಚಿವ ಸೋಮಶೇಖರ್

Spread the love

ಮಾಜಿ ಮುಖ್ಯಮಂತ್ರಿ ಸಿದ್ದgರಾಮಯ್ಯ ಅವರು ಜ್ಯೋತಿಷ್ಯ ಕಲಿಯುತ್ತಿರಬೇಕು. ಹಾಗಾಗಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು

ನಮ್ಮ ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಹಾಗಾಗಿ ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದರು.

ಬೆಂಗಳೂರು ಅಭಿವೃದ್ಧಿ ಸಿಡಿ ಮಾತ್ರ ಗೊತ್ತು

ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಅನೇಕ ತಿಂಗಳು ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ, ಈಗ ಎಲ್ಲವೂ ಪ್ರಾರಂಭವಾಗಿದ್ದು, ಪ್ರತೀ ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ತಲಾ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

error: Content is protected !!