Main News

ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗ್ಬೇಕು: ಸಚಿವ ಮಾಧುಸ್ವಾಮಿ ಬಯಕೆ-ಸ್ವಾರಸ್ಯಕರ ಚರ್ಚೆ

ನಾನೂ ಸಂಸತ್ತಿಗೆ ಹೋಗಲು ಯೋಚನೆ ಮಾಡಿದ್ದೆ. ಆದರೆ ಎರಡೂ ಸಲ ಸೋತೆ. ಆಗಿನಿಂದ ಮತ್ತೆ ಸಂಸತ್‌ಗೆ ಹೋಗಲು ಯೋಚನೆ ಮಾಡಿಲ್ಲ ಎಂದವರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ.


ವಿಧಾನಸಭೆ ಕಲಾಪಗಳಲ್ಲಿ ಬಿಸಿ ಬಿಸಿ ಚರ್ಚೆ, ಮಾತಿನ ಚಕಮಕಿ, ವಾಗ್ಯುದ್ದ ಕೊನೆಗೆ ಸಭಾತ್ಯಾಗ ಇವೆಲ್ಲಾ ಇದ್ದೇ ಇರುತ್ತೆ. ಹಾಗೆಯೇ ಹಿರಿಯ ಸದಸ್ಯರು, ಸಚಿವರ ನಡುವೆ ಹಾಸ್ಯಚಟಾಕಿ, ತಮಾಷೆಯಾಗಿ ಕಾಲೆಳೆಯುವಂತಹ ಪ್ರಸಂಗಗಳು ಹಿಂದೆಲ್ಲ ನಡೆದಿವೆ. ಇಂದೂ ವಿಧಾನಸಭೆ ಸ್ವಾರಸ್ಯಕರ, ಹಾಸ್ಯಧಾಟಿಯ ಘಟನೆಗೆ ಸಾಕ್ಷಿಯಾಯಿತು. ಅದೆಂದರೆ, ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕೆಂಬುದು.


ಸಚಿವ ಮಾಧುಸ್ವಾಮಿ ಮಾತನಾಡುತ್ತಾ, ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕು. ಅಲ್ಲಿ ಕರ್ನಾಟಕದ ಕಹಳೆ ಮೊಳಗಿಸಬೇಕೆಂದು ಹೇಳಿದರು. ಇಂತಹ ಸನ್ನಿವೇಶಕ್ಕೆ ಸ್ಪಂದಿಸುವಂತೆ ಮಧ್ಯಪ್ರವೇಶಿಸಿದ ಕಂದಾಯ ಸಚಿವ ಆರ್. ಅಶೋಕ್, ಇಲ್ಲ, ಇಲ್ಲ, ಸಿದ್ದರಾಮಯ್ಯ ಇಲ್ಲಿಯೇ ಇರಬೇಕು. ನಮಗೆ ಮಾರ್ಗದರ್ಶನ ಕೊಡಬೇಕೆಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಶೋಕ್, ಮಾಧುಸ್ವಾಮಿ ನನ್ನ ಉತ್ತಮ ಸ್ನೇಹಿತರು ಎಂದರು.


ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ತೆರಳುವ ಬಗ್ಗೆ ಈಶ್ವರಪ್ಪನವರ ಅಭಿಪ್ರಾಯ ಏನೆಂದು ಕೇಳಿದರು. ಅವರನ್ನು ಕೇಳಬೇಡಿ, ಇಲ್ಲೂ ಬೇಡ, ಅಲ್ಲೂ ಬೇಡ ಎನ್ನತ್ತಾರೆ ಎಂದು ಸಿದ್ದರಾಮಯ್ಯ ವಿನೋದವಾಗಿ ನುಡಿದರು.


ಈ ಸಂದರ್ಭದಲ್ಲಿ, ನಿಮ್ಮ ಹೃದಯ ಮುಟ್ಟಿಕೊಂಡು ಹೇಳಿ, ನಾನು ಆ ರೀತಿ ಹೇಳ್ತೀನಾ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿಯೇಬಿಟ್ಟರು. ಇವರಿಬ್ಬರ ಮನೋಧರ್ಮ ಅರಿತವರಿಗೆ ಇದು ತಮಾಷೆಯಾಗಿಯೇ ಕಂಡಿತು.


ನಾನು ಆಂತರಿಕವಾಗಿಯೂ ಹೇಳಲ್ಲ, ಬಹಿರಂಗವಾಗಿಯೂ ಹೇಳಲ್ಲ ಎಂದು ಸಿದ್ದರಾಮಯ್ಯ ಈಶ್ವರಪ್ಪ ಅವರನ್ನುದ್ದೇಶಿಸಿ ಹೇಳಿದ ನಂತರ ವಾಸ್ತವಸ್ಥಿತಿ ವಿವರಿಸಿದರು. ನಾನು ಸಂಸತ್‌ಗೆ ಹೋಗಲೆಂದು ಎರಡು ಸಲ ಚುನಾವಣೆಯಲ್ಲಿ ಸ್ಪರ್ದಿಸಿದ್ದೆ. ಆದರೆ ಎರಡೂ ಸಲ ಸೋತೆ. ಆಗಿನಿಂದ ಸಂಸತ್‌ಗೆ ಹೋಗುವ ಯೋಚನೆ ಮಾಡಿಲ್ಲ ಎಂದು ಹೇಳುವುದರೊಂದಿಗೆ ಈ ವಿಚಾರವನ್ನು ಮುಕ್ತಾಯಗೊಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024