ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಸಹಾನೂಭೂತಿ ಇಟ್ಟುಕೊಳ್ಳಬೇಕು. ಕುಮಾರಸ್ವಾಮಿ ಅವರೂ ಕೂಡ ಸಿದ್ದರಾಮಯ್ಯ ಅವರ ವಿಚಾರವಾಗಿ ಹೆಚ್ಚು ಮಾತನಾಡಬಾರದು ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮಂಡ್ಯ ಜಿಲ್ಲೆಯ ಕೊಪ್ಪ ದಲ್ಲಿ ಸಲಹೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡರು ಸಿದ್ದರಾಮಯ್ಯ ಜೆಡಿಎಸ್ ಮೂಲದಿಂದ ಬೆಳೆದು ಬಂದವರು. ಸಿದ್ದರಾಮಯ್ಯ ಅವರಿಗೆ ಸಿಟ್ಟು ಜಾಸ್ತಿ, ನಮ್ಮ ಕುಮಾರಸ್ವಾಮಿ ಅವರು ಸುಮ್ಮನೆ ಇರದೇ ಜಾಡಿಸಿ ಬಿಡುತ್ತಾರೆ. ಅಣ್ಣ ತಮ್ಮಂದಿರ ಜಗಳದಂತೆ ಇಬ್ಬರ ಜಗಳ ನಡೆಯುತ್ತಲೇ ಇರುತ್ತದೆ ಎಂದರು.
ಸಿದ್ದರಾಮಯ್ಯ ಒಳ್ಳೆಯ ವಾಗ್ಮಿ, ಜನಪರ ಆಡಳಿತ ಕೊಡುವ ಶಕ್ತಿ ಇರುವ ಮನುಷ್ಯ ನಮ್ಮ ಜೆಡಿಎಸ್ ಬಗ್ಗೆ ಅವರಿಗೆ ಸಾಫ್ಟ್ ಕಾರ್ನರ್ ಇರಬೇಕು. ಉಂಡ ಮನೆ, ಬೆಳೆದ ಮನೆ ಇವೆಲ್ಲನ್ನು ನೋಡಿಕೊಳ್ಳಬೇಕು ಎಂದರು.
ಎರಡು ರಾಷ್ಟ್ರೀಯ ಪಕ್ಷಗಳು ದೊಂಬರಾಟದಲ್ಲಿ ಮುಳುಗೋಗಿವೆ. ಮೇ ವೇಳೆಗೆ ರಾಜ್ಯದ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಕಾಣಲಿದೆ. ಕಾಂಗ್ರೆಸ್ನಿಂದ ಬಿಜೆಪಿಗೆ 15 ಮಂದಿ ಬರುತ್ತಾರೆ ಅಂತ ಬೆಳಗಾವಿ ಸಾಹುಕಾರರು ಹೇಳುತ್ತಾರೆ. ಬಿಜೆಪಿಯಿಂದ ಕಾಂಗ್ರೆಸ್ಗೆ 25 ಮಂದಿ ಬರುತ್ತಾರೆ ಎನ್ನುವುದನ್ನು ಸಹ ನೋಡಿದ್ದೇವಿ. ಯಾರ್ಯಾರು ಯಾವ ಯಾವ ಪಕ್ಷಕ್ಕೆ ಹೋಗುತ್ತಾರೆ ಇನ್ನು 6 ತಿಂಗಳು ಗೊತ್ತಾಗಲ್ಲ. 6 ತಿಂಗಳ ಬಳಿಕ ಹೋಗುವವರು ಬರುವವರು ಗೊತ್ತಾಗುತ್ತದೆ ಎಂದಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment