ಕೋಲಾರದಲ್ಲಿ ಸ್ಪರ್ಧೆಗೆ ಇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಲ್ಲಿಲ್ಲದ ಅಗ್ನಿಪರೀಕ್ಷೆ ನಡೆಯುತ್ತಿದೆ.
ಕೋಲಾರದಲ್ಲಿ ಸ್ಪರ್ಧೆಗೆ ಪಕ್ಷದ ಒಳಗೆ ವಿರೋಧಿ ಗುಂಪು ಒಂದು ಕಡೆಯಾದರೆ, ಇನ್ನೊಂದು ಕಡೆ ವಿಪಕ್ಷ ಜೆಡಿಎಸ್ ನ ವಿರೋಧ ಮತ್ತೊಂದು ಕಡೆ. ಸಿದ್ದರಾಮಯ್ಯ ಕೋಲಾರ ಸ್ಪರ್ದೆ ಮಾಡಿದರೆ ಅವರನ್ನು ಬಿಡದೆ ಖೆಡ್ಡಾ ತೋಡಲು ಕುಮಾರಸ್ವಾಮಿ, ಇಬ್ರಾಹಿಂ ಪ್ಲಾನ್ ಮಾಡುತ್ತಿದ್ದಾರೆ.ಜನವರಿ 12ರಂದು ಹುಬ್ಬಳ್ಳಿಗೆಮೋದಿ: ಭರದ ಸಿದ್ಧತೆ
ಕುಮಾರಸ್ವಾಮಿ-ಇಬ್ರಾಹಿಂ ಪ್ಲಾನ್ ಏನು..?:
ಕೋಲಾರ ಕ್ಷೇತ್ರದಲ್ಲಿ ಒಕ್ಕಲಿಗ, ಅಲ್ಪಸಂಖ್ಯಾತ ಮತಗಳು ನಿರ್ಣಾಯಕ. ಹೀಗಾಗಿ ಈ ಮತಗಳ ಮೇಲೆ ಇಬ್ಬರು ನಾಯಕರು ಕಣ್ಣಿಟ್ಟಿದ್ದಾರೆ. ಒಕ್ಕಲಿಗ ಮತಗಳ ಭೇಟೆಗೆ ಕುಮಾರಸ್ವಾಮಿ ಹಾಗೂ ಅಲ್ಪಸಂಖ್ಯಾತ ಮತಗಳಿಗೆ ಇಬ್ರಾಹಿಂ ಅಖಾಡಕ್ಕೆ ಇಳಿಯುವುದಾಗಿದೆ.
ಸಿದ್ದರಾಮಯ್ಯ ಸೋಲಿಸೋಕೆ ಕುಮಾರಸ್ವಾಮಿ, ಇಬ್ರಾಹಿಂ ಒಟ್ಟಾಗಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಾರೆ. ಅತಿ ಹೆಚ್ಚು ಪ್ರಚಾರ ಸಭೆಗಳನ್ನು ಆಯೋಜನೆ ಮಾಡಿ ಸಿದ್ದರಾಮಯ್ಯ ವಿರುದ್ಧ ಜನ ವಿರೋಧಿ ಭಾವನೆ ಬರುವಂತೆ ಮೂಡಿಸೋದು. ಸಿದ್ದರಾಮಯ್ಯ ಒಕ್ಕಲಿಗರ ವಿರೋಧಿಯಾಗಿದ್ದು, ಸಮ್ಮಿಶ್ರ ಸರ್ಕಾರ ಬೀಳಿಸಿದ್ದಾರೆ ಅಂತ ಪ್ರಚಾರ ಮಾಡಿ ಒಕ್ಕಲಿಗರ ಮತ ಪಡೆಯುವುದು.
ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕ್ ರಾಜಕೀಯ (Vote Bank Politics) ಕ್ಕೆ ಬಳಕೆ ಮಾಡಿಕೊಳ್ಳುತ್ತೆ ಅಂತ ಇಬ್ರಾಹಿಂ ಪ್ರಚಾರ ಮಾಡೋದು. ಹಾಗೂ ಕೋಲಾರ ಕ್ಷೇತ್ರದಲ್ಲಿ ಹೆಚ್ಚು ಮುಸ್ಲಿಂ ಸಮುದಾಯ ಸಭೆಗಳನ್ನ, ಚುನಾವಣೆ ಪ್ರಚಾರವನ್ನು ಪ್ರತ್ಯೇಕವಾಗಿ ಮಾಡಿ ಸಿದ್ದರಾಮಯ್ಯ ವಿರುದ್ಧ ಸೇಡು ತೀರಿಸಿಕೊಳ್ಳುವ ಯೋಜನೆ ರೂಪಿಸಲಾಗಿದೆ.
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023
- ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ