ಅಭಿಮಾನಿ ಆಗಲಿ, ಆಗದೇ ಇರಲಿ. ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದ ಅದ್ಕೆ ಬಂದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಭಿಮಾನಿ ಕೋಡಿದೊಡ್ಡಿ ಕೃಷ್ಣ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟಿನಲ್ಲಿ ಬರೆದುಕೊಂಡು ಆತ್ಮಹತ್ಮೆಗೆ ಶರಣಾಗಿದ್ದಾನೆ.
ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರ ಅಲ್ಲ ಎಂದು ಕಿವಿಮಾತು ಹೇಳಿದರು.
ಡೇತ್ ನೋಟ್ನಲ್ಲಿ ನಾನು ಸಿದ್ದರಾಮಯ್ಯ ಅಭಿಮಾನಿ, ಅವರು ನನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಬರೆದಿದ್ದರಂತೆ. ನನಗೆ ಈ ವಿಷಯ ತಿಳಿದ ಮೇಲೆ ಅಂತ್ಯಕ್ರಿಯೆ ಬರಬೇಕು ಎಂದು ಬಂದಿದ್ದೇನೆ. ನನಗೆ ಆತ ಅಂತಹ ಪರಿಚಯ ಇಲ್ಲ. ಪಾಪ ಆತ ನನಗೆ ಗೊತ್ತಿಲ್ಲದೇ ದೊಡ್ಡ ಅಭಿಮಾನಿ ಯಾಗಿದ್ದ. ಪಾಪ ಸಾಮಾನ್ಯ ಕುಟುಂಬದಿಂದ ಬಂದಿದ್ದ ವ್ಯಕ್ತಿ ಆತ, ಮನೆಯನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ. ಈತನ ಸಾವಿನಿಂದ ಮನೆಯವರಿಗೆ ನಷ್ಟ ಆಗಿದೆ. ಆತನ ತಾಯಿ-ಅಣ್ಣನನ್ನು ನಾನು ಮಾತನಾಡಿಸಿದೆ. ಇನ್ನೂ ಚಿಕ್ಕ ವಯಸ್ಸು ಮದುವೆಯಾಗಿಲ್ಲ. ಚಿಕ್ಕ ವಯಸ್ಸಿಗೆ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ. ಪ್ರಾಣ ಕಳೆದುಕೊಂಡಿರುವುದು ಕುಟುಂಬಕ್ಕೆ ಮಾತ್ರ ಅಲ್ಲ ಸಮಾಜಕ್ಕೂ ನಷ್ಟ. ಆತನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು.
ಆತ್ಮಹತ್ಯೆ ಯಾವುದೇ ಸಮಸ್ಯೆಗೂ ಪರಿಹಾರ ಅಲ್ಲ. ಆತ್ಮಹತ್ಯೆ ಮನಸ್ಸು ಮಾಡೋದು ಸರಿಯಾದ ನಿರ್ಧಾರ ಅಲ್ಲ. ಎಷ್ಟೇ ತೊಂದರೆ ಇರಲಿ ಸಮಸ್ಯೆ ಇರಲಿ. ಮನೆಯವರ ಜೊತೆ ಸ್ನೇಹಿತರ ಜೊತೆ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment