ಮಾಜಿ ಸಿಎಂ ಸಿದ್ದರಾಮಯ್ಯಗೆ ಕೋಲಾರವೇ ಸೂಕ್ತ ಕ್ಷೇತ್ರ ಎಂಬ ಅಭಿಪ್ರಾಯಕ್ಕೆ ಸ್ಥಳೀಯ ಕೈ ನಾಯಕರು ಬಂದ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ.
ಈ ಭೇಟಿ ಒಂದು ರೀತಿಯಲ್ಲಿ ಸಿದ್ದರಾಮಯ್ಯ ಶಕ್ತಿಪ್ರದರ್ಶನ ಹೌದು. ಮತ್ತೊಂದು ಕ್ಷೇತ್ರ ಸಮೀಕ್ಷೆ ಬಳಿಕ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಭೇಟಿ ವಿಶೇಷವಾಗಿದೆ.ದೆಹಲಿ, ಸುತ್ತಮುತ್ತ ಭೂಕಂಪನ; ಮನೆಯಿಂದ ಹೊರಗೆ ಓಡಿಬಂದ ಜನ
ಭಾನುವಾರ ಕೋಲಾರ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯನವರ ಮಾಸ್ಟರ್ ಪ್ಲಾನ್
ಕಾರ್ಯಕ್ರಮಗಳ ವಿವರ :
1) ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.
2) ಮೆಥೋಡಿಸ್ಟ್ ಚರ್ಚ್ಗೆ ತೆರಳಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
3) ಕಾಲೇಜು ವೃತ್ತದಲ್ಲಿನ ವಾಲ್ಮಿಕಿ ಮಹರ್ಷಿಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
4) ಇಟಿಸಿಎಂ ಸರ್ಕಲ್ ನಲ್ಲಿರುವ ಸಂಗೊಳ್ಳಿರಾಯಣ್ಣ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
5) ಕ್ಲಾಕ್ ಟವರ್ ಬಳಿ ಇರುವ ಕುತುಬ್ ಶಾ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
6) ಕೈವಾರ ತಾತಯ್ಯನವರ ವಿಗ್ರಹಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.
7) ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆಯಲ್ಲಿ ಕೋಲಾರಕ್ಕೆ ಕೊಟ್ಟ ಕೆಸಿ ವ್ಯಾಲಿ ನೀರಾವರಿ ಯೋಜನೆಯ ನರಸಾಪುರ ಕೆರೆಗೆ ಬೇಟಿ ನೀಡಿ ಜಿಲ್ಲೆಯ ಜನರಿಗೆ ತಮ್ಮ ಕೊಡುಗೆಯನ್ನು ನೆನಪಿಸುವ ಕೆಲಸವನ್ನೂ ಮಾಡಲಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ