ಆರೋಗ್ಯ ಇಲಾಖೆಯ ಮೂರು ವರ್ಷದ ಖರ್ಚಿನ ಪ್ರತಿ ಪೈಸೆಯ ಲೆಕ್ಕ ಕೊಡುತ್ತೇನೆ, ತನಿಖೆ ಮಾಡಿಸಲಿ: ಸಚಿವ ಡಾ.ಕೆ.ಸುಧಾಕರ್ರಿಂದ ಸಿದ್ದರಾಮಯ್ಯನವರಿಗೆ ಸವಾಲು.
ಕೆಲ ಸ್ಥಳೀಯ ಮುಖಂಡರು ಸಿದ್ದರಾಮಯ್ಯನವರನ್ನು ಕೋಲಾರಕ್ಕೆ ಕರೆತಂದು ಖೆಡ್ಡಾಗೆ ಬೀಳಿಸಿದ್ದಾರೆ. ಇದು ಕಷ್ಟದ ಕ್ಷೇತ್ರ. ಅವರು ಗೆಲ್ಲುವುದಿಲ್ಲ. ಆದರೆ ಅಂತಿಮವಾಗಿ ಅವರು ಅಲ್ಲಿ ಸ್ಪರ್ಧೆಗೆ ನಿಲ್ಲದೆ ವರುಣಾದಲ್ಲಿ ಸ್ಪರ್ಧಿಸಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ನಾನು ಓಡಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುತ್ತೇನೆ. ಸಿದ್ದರಾಮಯ್ಯನವರ ವಿರುದ್ಧ ನಿಲ್ಲುವ ಬಿಜೆಪಿ ಅಭ್ಯರ್ಥಿಯನ್ನೂ ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದರು.ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು
ಸಿದ್ದರಾಮಯ್ಯ ಅವರು ರಾಜಕೀಯಕ್ಕಾಗಿ ಮಾತನಾಡಬಹುದು. ಆದರೆ ನಾನು ಏಕೆ ಕಾಂಗ್ರೆಸ್ ತೊರೆದೆ ಎನ್ನುವುದು ಅವರಿಗೂ ಗೊತ್ತಿದೆ. ಹಣಕ್ಕಾಗಿ ಹೋಗದೆ ಸಿದ್ಧಾಂತಕ್ಕಾಗಿ ಬಿಜೆಪಿಯನ್ನು ಸೇರಿದೆ ಹಾಗೂ ಅನೈತಿಕವಾಗಿ ಜನತಾದಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಬೇಸತ್ತಿದ್ದೆ ಎಂಬುದು ಅವರಿಗೆ ತಿಳಿದಿದೆ ಎಂದರು.
ಸಿದ್ದರಾಮಯ್ಯನವರು ಜೀವನವಿಡೀ ಕಾಂಗ್ರೆಸ್ ನಾಯಕರನ್ನು ಬೈದುಕೊಂಡೇ ಇದ್ದರು. ಜನತಾದಳದಲ್ಲೇ ಇದ್ದು ಸಚಿವರಾಗಿ, ಡಿಸಿಎಂ ಆಗಿ, ಬಳಿಕ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಸೇರಿದರು. ಒಂದು ವರ್ಷ ತಡೆದುಕೋ, ಲೋಕಸಭೆ ಚುನಾವಣೆ ಬಳಿಕ ಕುಮಾರಸ್ವಾಮಿಯವರನ್ನು ಸಿಎಂ ಆಗಿ ಒಂದು ದಿನವೂ ಇರಿಸುವುದಿಲ್ಲ ಎಂದು ನಮಗೆಲ್ಲರಿಗೂ ಸಿದ್ದರಾಮಯ್ಯನವರು ಹೇಳಿದ್ದರು. ಆ ಬಳಿಕ 5 ವರ್ಷವೂ ಸಿಎಂ ಎಂದುಬಿಟ್ಟರು. ಆ ಸಮಯದಲ್ಲಿ ಹೆಚ್ಚು ಸಮಸ್ಯೆ ಇತ್ತು. ನನ್ನ ರಾಜಕೀಯ ಭವಿಷ್ಯವೇ ಮುಗಿಯುತ್ತಿತ್ತು. ಆದರೂ ಮತ್ತೆ ಸ್ಪರ್ಧಿಸಿ ಜನರ ಆಶೀರ್ವಾದ ಪಡೆದೆ ಎಂದರು.
ಸಿಎಜಿ ವರದಿ
2013-2018 ರ ಅವಧಿಯ ಸಿಎಜಿ ವರದಿಯಲ್ಲಿರುವ ಅಂಶಗಳನ್ನು ಹೇಳಿದ್ದೇನೆ. ಆ ಅವಧಿಯಲ್ಲಿ 35 ಸಾವಿರ ಕೋಟಿ ರೂ. ನಷ್ಟು ಆರ್ಥಿಕ ಅವ್ಯವಹಾರ ಕಂಡುಬಂದಿದೆ ಎಂದು ವರದಿಯಲ್ಲೇ ಹೇಳಲಾಗಿದೆ. ಕೋವಿಡ್ ನಿರ್ವಹಣೆ ಬಗ್ಗೆ ಸದನದಲ್ಲೇ ಉತ್ತರ ನೀಡಿದ್ದರೂ, ಉತ್ತರ ಕೇಳದೆಯೇ ಕಾಂಗ್ರೆಸ್ ನಾಯಕರು ಪಲಾಯನ ಮಾಡಿದ್ದರು. ಕೋವಿಡ್ ನಿರ್ವಹಣೆಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಇದಕ್ಕೆ ಬೇಕಿದ್ದರೆ ಶ್ವೇತಪತ್ರವನ್ನೂ ಹೊರಡಿಸಲು ತಯಾರಿದ್ದೇವೆ. ಎಸಿಬಿ ರದ್ದು ಮಾಡಲು ಸಹಕರಿಸುವ ಮೂಲಕ ಲೋಕಾಯುಕ್ತಕ್ಕೆ ನಮ್ಮ ಸರ್ಕಾರವೇ ಶಕ್ತಿ ನೀಡಿದೆ ಎಂದು ಸಚಿವರು ಹೇಳಿದರು.
ತನಿಖೆ ಮಾಡಿಸಲಿ
ಮೂರು ವರ್ಷದಲ್ಲಿ ಆರೋಗ್ಯ ಇಲಾಖೆಯಿಂದ ಖರ್ಚು ಮಾಡಿದ ಮೊತ್ತದ ಪ್ರತಿ ಪೈಸೆಯ ಲೆಕ್ಕವನ್ನು ಸಿದ್ದರಾಮಯ್ಯ ಅವರಿಗೆ ನೀಡುತ್ತೇನೆ. ಯಾವುದೇ ತನಿಖೆಯನ್ನು ಅವರು ಮಾಡಿಸಲಿ. ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ರಾಜ್ಯ ಎಂಬ ಪ್ರಶಸ್ತಿಯನ್ನು ಮಾಧ್ಯಮ ಸಂಸ್ಥೆಯೇ ನೀಡಿದೆ. ರಾಜಕೀಯದ ತೆವಲಿಗಾಗಿ ಟೀಕೆ ಮಾಡಿದರೆ ಏನೂ ಮಾಡಲಾಗುವುದಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಅನಿಲ್ ಆಂಟನಿ ಅವರು ಟ್ವೀಟ್ ಮಾಡಿದ್ದಾರೆ. ಅಷ್ಟಕ್ಕೇ, ರಾಹುಲ್ ಗಾಂಧಿ ಸೇರಿದಂತೆ ಅನೇಕಯ ನಾಯಕರು ಅವರ ಮೇಲೆ ಒತ್ತಡ ತಂದಿದ್ದಾರೆ. ಒಂದು ಕಡೆ ಫ್ರೀ ಸ್ಪೀಚ್ ಬಗ್ಗೆ ಹೇಳುತ್ತಾರೆ, ಇನ್ನೊಂದು ಕಡೆ ಒತ್ತಡ ತರುತ್ತಾರೆ. ಇದರಿಂದ ಬೇಸತ್ತು ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ ಎಂದರು.
ಕೋಲಾರದಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಮೆಡಿಕಲ್ ಕಾಲೇಜು ತರಲೇ ಇಲ್ಲ. ಮುಂದಿನ ದಿನಗಳಲ್ಲಿ ನಮ್ಮ ಬಿಜೆಪಿ ಸರ್ಕಾರ ಕೋಲಾರದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲಿದೆ. ಇಲ್ಲಿನವರೇ ಆರೋಗ್ಯ ಸಚಿವರಾದ್ರೂ ಏನೂ ಕೆಲಸ ಮಾಡಲಿಲ್ಲ ಎಂದರು.
ಜನರ ಆಶೀರ್ವಾದ ಇದೆ
ಕ್ರಿಕೆಟ್ನಲ್ಲಿ ಬ್ಯಾಟ್ಸ್ಮನ್ ಬಾಲ್ ನೋಡಿ ಆಡುತ್ತಾನೆಯೇ ಹೊರತು, ಬೌಲರ್ನ್ನು ನೋಡುವುದಿಲ್ಲ. ನಾನು ಕೂಡ ಮೂರು ಬಾರಿ ಗೆದ್ದಿದ್ದು, ಜನರ ಮೇಲೆ ನನಗೆ ನಂಬಿಕೆ ಇದೆ. ಜನರ ಆಶೀರ್ವಾದ ಇರುವವರೆಗೆ ಚಿಕ್ಕಬಳ್ಳಾಪುರ ನನಗೆ ಉತ್ತಮ ಪಿಚ್ ಎಂದು ಸಚಿವರು ಹೇಳಿದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ