ಮಂಗಳವಾರ ದಿ. ರಾಕೇಶ್ ಸಿದ್ದರಾಮಯ್ಯ ಪುತ್ರ ಧವನ್ ರಾಕೇಶ್ ಅವರು ಸಿದ್ದರಾಮಯ್ಯ ಅವರ ಜೊತೆಗೆ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದಾರೆ.
ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಮಾತನಾಡಿ, ಮೊಮ್ಮಗನ ಜೊತೆ ಬಂದಿರುವುದರ ಬಗ್ಗೆ ಮಾಹಿತಿ ನೀಡಿ ಧವನ್ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ತಿಳಿಸಿದರು.
ಧವನ್ ಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಎಡಗೈಗೆ ಗಾಯವಾಗಿ ನಂಜು ಹೆಚ್ಚಾಗಿ ಜ್ವರದಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣಾ ಸಮಯ ಅದು, ಇದು ಎಂದು ಹೇಳಿಕೊಂಡು ಜ್ವರ ಬರುವುದಿಲ್ಲ. ಇದು ನಿಸರ್ಗದ ನಿಯಮ. ಇನ್ನೂ ನಾಲ್ಕೈದು ದಿನ ಸ್ವಲ್ಪ ರೆಸ್ಟ್ ಬೇಕು. ಆಮೇಲೆ ಎಲ್ಲಾ ಸರಿ ಹೋಗುತ್ತೇನೆ ಎಂದರು.ಇದನ್ನು ಓದಿ –ಸುಬ್ರಮಣ್ಯ ಬಳಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ನಾಲ್ವರ ದುರಂತ ಸಾವು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು