ಕಾಂಗ್ರೆಸ್ ನವರು ತಮ್ಮ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದರೆ, ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಪ್ರಯತ್ನ ಪಡುತ್ತಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಅವರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್,
ಬಿಜೆಪಿ ಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರ ಖುರ್ಚಿಯನ್ನು ಉಳಿಸಿಕೊಂಡರೆ ಸಾಕು. ಹಾಗಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆಯೇ ಪರಸ್ಪರ ಉತ್ತಮ ಬಾಂಧವ್ಯ ಇಲ್ಲ. ಒಬ್ಬರಿಗೊಬ್ಬರು ಅಧಿಕಾರವನ್ನು ಕಿತ್ತುಕೊಳ್ಳಲು ಬಡಿದಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
ರಾಜರಾಜೇಶ್ವರಿ ನಗರ , ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರು ಸ್ಪಷ್ಟ. ಮುನಿರತ್ನ ಅವರ ಪರ ಅಲೆ ಇರುವುದು ನಮಗೆ ಪ್ರಚಾರ ಸಂದರ್ಭದಲ್ಲಿಯೇ ಗೊತ್ತಾಗಿದೆ. ಶೇ.50ರಷ್ಟು ಮಂದಿ ಅವರ ಅಭಿವೃದ್ಧಿ ನೋಡಿ ಮತ ನೀಡಿದರೆ, ಇನ್ನು ಶೇ.50 ಮಂದಿ ಬಿಜೆಪಿ ಪಕ್ಷಕ್ಕಾಗಿ ಮತ ಚಲಾಯಿಸಿದ್ದಾರೆ. ಅಲ್ಲದೆ, ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಸೋಲನ್ನು ಸ್ವಾಗತಿಸಲು ಕಾಯುತ್ತಿದ್ದಾರೆ
ಈಗ ನಡೆದಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆ ಸೇರಿದಂತೆ ನಾಲ್ಕು ವಿಧಾನಪರಿಷತ್ ಸ್ಥಾನಗಳಲ್ಲೂ ಕಾಂಗ್ರೆಸ್ ಸೋಲಬೇಕೆಂಬುದು ಅವರ ಪಕ್ಷಗಳ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಕಾಯುತ್ತಿದೆ. ಕಾರಣ, ಸೋತ ಮೇಲೆ ಪರಸ್ಪರ ಒಬ್ಬರ ಮೇಲೊಬ್ಬರು ಸೋಲಿಗೆ ಕಾರಣೀಭೂತರು ಎಂದು ಆರೋಪಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಅವರ ಪಕ್ಷದಲ್ಲಿಯೇ ನಡೆಯುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ