ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೊದಲು ಪ್ರತಿ ಪ್ರಶ್ನೆಗೆ ನಾಲ್ಕು ಆಯ್ಕೆಗಳಷ್ಟೇ ಇರುತ್ತಿದ್ದವು. ಆದರೆ, ಈಗಿನಿಂದ, ಯಾವುದೇ ಪ್ರಶ್ನೆಗೆ ಉತ್ತರಿಸಲು ಇಚ್ಛಿಸದಿದ್ದರೆ, ವಿದ್ಯಾರ್ಥಿಗಳು ಒಎಂಆರ್ ಹಾಳೆಯಲ್ಲಿ ನೀಡಲಾದ ಐದನೇ ಆಯ್ಕೆಯನ್ನು ಗುರುತಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಪರೀಕ್ಷೆಗಳಲ್ಲಿ ಒಎಂಆರ್ ಹಾಳೆ ತಿದ್ದುಪಡಿಯಾದ ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ರಚಿಸಲಾದ ಸಮಿತಿಯ ಶಿಫಾರಸಿನ ಮೇರೆಗೆ ಈ ಹೊಸ ಕ್ರಮವನ್ನು ಜಾರಿಗೆ ತರಲಾಗಿದೆ.
ಈ ಬದಲಾವಣೆ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಭದ್ರ ಮತ್ತು ಪಾರದರ್ಶಕಗೊಳಿಸಲಿದೆ. ವಿದ್ಯಾರ್ಥಿಗಳು ಉತ್ತರಿಸಲು ಬಯಸದ ಪ್ರಶ್ನೆಗಳಿಗೆ ಐದನೇ ಆಯ್ಕೆಯನ್ನು ಗುರುತಿಸುವ ಮೂಲಕ ಗೊಂದಲ ತಪ್ಪಿಸಿ ಸುಗಮವಾಗಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತದೆ.ಇದನ್ನು ಓದಿ –ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಶಿಕ್ಷಣ ತಜ್ಞರ ಪ್ರಕಾರ, ಈ ಹೊಸ ಕ್ರಮವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಪರಿಣಾಮಕಾರಿ ಪರಿಹಾರವಾಗಿ ಕಾರ್ಯನಿರ್ವಹಿಸಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು