ಅ. 18 ರಂದು ಮಂಡ್ಯದ ಮೈಶುಗರ್ ಸಕ್ಕರೆ ಕಾಖಾ೯ನೆ ಆರಂಭಕ್ಕೆ ಸಂಬಂಧಿಸಿದಂತೆ ರೈತ ನಾಯಕರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ, ಸಚಿವರ ಸಭೆ ಕರೆದು ಅಂತಿಮ ನಿಣ೯ಯ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯದಲ್ಲಿ ಶುಕ್ರವಾರ ತಿಳಿಸಿದರು.

ಮೈಸೂರಿಗೆ ಹೋಗುವ ಮಾಗ೯ ಮಧ್ಯೆ ಮಂಡ್ಯದಲ್ಲಿ ರೈತರು ಮೈಶುಗರ್ ಆರಂಭಿಸುವಂತೆ ಒತ್ತಾಯಿಸಿ ಕಳೆದ 36 ದಿನಗಳಿಂದ ನಡೆಸಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬಸವರಾಜು , ಬೊಮ್ಮಾಯಿ ಮಾತನಾಡಿ, ಕಳೆದ ಬಾರಿ ಧರಣಿ ಸ್ಥಳಕ್ಕೆ ಬರಬೇಕಿತ್ತು. ಈ ಬಾರಿ ಮೈಸೂರಿಗೆ ಹೋಗುವಾಗ ಮನವಿ ಕೊಡ್ತಿರಿ ಎಂದು ಬಂದಿದ್ದೇನೆ ಎಂದರು
ಅ. 18 ರಂದು ನಿಮ್ಮೆಲ್ಲರನ್ನೂ ಕರೆಸಿ ಚರ್ಚಿಸಿ ಒಂದು ನಿರ್ಣಯ ತೆಗೆದುಕೊಳ್ಳೊಣ. ಮೈಶುಗರ್ ಕಾರ್ಖಾನೆ ಇತಿಹಾಸ ಹೊಂದಿದೆ.
ಮಂಡ್ಯ ಅಂದ್ರೆ ಸಕ್ಕರೆ ನಾಡು, ಸಕ್ಕರೆ ನಾಡಿನಲ್ಲಿ ಈ ಕಾರ್ಖಾನೆ ಉಳಿಯಬೇಕು ಎಂದರು. ಕಬ್ಬು ಅರೆದರೆ ಮಾತ್ರ ಮಂಡ್ಯಕ್ಕೆ ಹೆಸರು. ರೈತರ ಕಬ್ಬು ನುರಿಸುವ ಕೆಲಸ ಆಗಬೇಕು.
ಒಂದು ಸಾರಿ ಕಾರ್ಖಾನೆ ಶುರುವಾದ್ರೆ, ಮತ್ತೆ ನಿಲ್ಲಬಾರದು. ಸಚಿವರು, ನೀವು ಎಲ್ಲರೂಬನ್ನಿ ಚರ್ಚೆ ಮಾಡೋಣ. ಒಂದು ಮಾತು ಕೊಟ್ಟ ಮೇಲೆ ಕಾಖಾ೯ನೆ ಆರಂಭಿಸಬೇಕು ಅಂದ್ರೆ ಆರಂಭಿಸಲೇ ಬೇಕು. ಈಗ ನೀವು ಬನ್ನಿ ಒತ್ತಾಯ ಮಾಡಿದರಿ. ನಿಮ್ಮ ಮೇಲಿನ ಗೌರವದಿಂದ ಬಂದಿದ್ದೇನೆ ಎಂದು ಸಿಎಂ ಹೇಳಿದರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ