Main News

ದುಂದು ವೆಚ್ಚದ ದಸರಾ ಇಲ್ಲ- ಸರಳ ದಸರಾಕ್ಕೆ ಮುಖ್ಯಮಂತ್ರಿಗಳ ಆದೇಶವಿದೆ – ಸಚಿವ ಎಸ್ ಟಿ ಎಸ್

ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಮೈಸೂರು ಅಭಿವೃದ್ಧಿಗೆ ಸಹಕಾರ

ಮೈಸೂರು ನಗರಕ್ಕೆ ಎಲ್ ಇ ಡಿ ಬೀದಿ ದೀಪ ಅಳವಡಿಸುವ ಸಂಬಂಧ ಬಹುವರ್ಷಗಳ ಬೇಡಿಕೆ ಇದೆ ಎಂದು ಶಾಸಕರಾದ ಎಲ್. ನಾಗೇಂದ್ರ , ಎಸ್.ಎ. ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ನನ್ನ ಬಳಿ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುಮೋದನೆ ಕೊಡಿಸಿದ್ದೇನೆ. ಇನ್ನು ಮುಂದೂ ಸಹ ಮೈಸೂರು ಅಭಿವೃದ್ಧಿಗೆ ಬೇಕಾದ ಕೆಲಸ ಹಾಗೂ ಸಹಕಾರವನ್ನು ಖಂಡಿತವಾಗಿ ಕೊಡುತ್ತೇನೆ ಎಂದು ಸಚಿವರು ತಿಳಿಸಿದರು.

39 ಸಾವಿರ ಕೋಟಿ ರೂ. ಸಾಲ
ರಾಜ್ಯದ ಲ್ಲಿ
15300 ಕೋಟಿ ರು. ರೈತರಿಗೆ ಸಾಲ ಕೊಡಲು ಈಗಾಗಲೇ ಚಾಲನೆ ಕೊಟ್ಟಿದ್ದೇವೆ. ಇದರಲ್ಲಿ ಈಗಾಗಲೇ 12 ಲಕ್ಷ ರೈತರಿಗೆ 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ. ಇನ್ನು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ನೀಡಲಾಗುತ್ತಿದೆ, 4 ವಿಭಾಗಗಳ ಮೂಲಕ ಸಾಲ ನೀಡಲಾಗುತ್ತದೆ. ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ಉಳಿದಂತೆ ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರ‍ಾರಂಭಿಸಲಾಗುವುದು ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024