ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ (83) ಕಳೆದ ರಾತ್ರಿ ಹೃದಯಸ್ತಂಬನದಿಂದ ವಿಧಿವಶರಾಗಿದ್ದಾರೆ.
ಶುಕ್ರವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಮಾಡಲಾಗಿದೆ, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಶಿವಮೊಗ್ಗ ಸುಬ್ಬಣ್ಣನವರ ಮಗ ಶ್ರೀರಂಗ ಮಾತಾಡಿ, ನಿನ್ನೆ ಸಂಜೆ ಸಂಜೆ 5 ಗಂಟೆ ವೇಳೆಗೆ ಹುಷಾರಿರಲಿಲ್ಲ. ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆವು.
ಅಲ್ಲಿಂದ ಜಯದೇವಕ್ಕೆ ಶಿಫ್ಟ್ ಮಾಡುವಷ್ಟರಲ್ಲಿ ಹೃದಯಘಾತವಾಯಿತು. ಬೆಂಗಳೂರಿನಲ್ಲೇ ಇವತ್ತು ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಾಡು ಕುದುರೆ ಸಿನಿಮಾದ `ಕಾಡು ಕುದುರೆ ಓಡಿಬಂದಿತ್ತಾ’ ಹಾಡಿಗೆ 1979ರಲ್ಲಿ ಸುಬ್ಬಣ್ಣ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇದು ಹಿನ್ನೆಲೆ ಗಾಯನದಲ್ಲಿ ಕನ್ನಡಕ್ಕೆ ಒಲಿದ ಮೊದಲ ರಾಷ್ಟ್ರಪ್ರಶಸ್ತಿಯಾಗಿದೆ.
ರಜತ ಕಮಲ, ಶಿಶುನಾಳ ಷರಿಫ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ, ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸುಬ್ಬಣ್ಣ ಅವರಿಗೆ ಲಭಿಸಿದೆ. ನೋಟರಿ ಪಬ್ಲಿಕ್ ಅಲ್ಲೂ ಅಪಾರ ಸೇವೆ ಸಲ್ಲಿಸಿದ್ದ ಶಿವಮೊಗ್ಗ ಸುಬ್ಬಣ್ಣ ಗಾಯಕರಾಗಿ ಜೊತೆಗೆ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.
ಗಾಯನ ಲೋಕದ ದಿಗ್ಗಜರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಆನಂದಮಯ ಈ ಜಗ ಹೃದಯ ಏತಕೆ ಭಯಮಾನೋ, ಮೊದಲು ಮಾನವನಾಗು ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಸುಬ್ಬಣ್ಣ ದನಿಯಾಗಿದ್ದಾರೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment