ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟಕ್ಕೆ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ನಿನ್ನೆ (ಸೆ. 28) ತಮ್ಮ ಆಹ್ವಾನ ಕುರಿತಂತೆ
ಅಧಿಕೃತ ಆದೇಶ ಹೊರಡಿಸಿರುವ ಈ ಸಂಭ್ರಮದ ವಿಚಾರಕ್ಕೆ ಎಸ್.ಎಂ. ಕೃಷ್ಣ ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿ, ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ
ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು