ರಾಜ್ಯದ 4 ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಿ ನಗರಾಭಿವೃದ್ಧಿ ಸಚಿವರ ಒತ್ತಾಯ

Team Newsnap
1 Min Read

ನ್ಯೂಸ್ ಸ್ನ್ಯಾಪ್.
ಬೆಂಗಳೂರು.
ಮೈಸೂರು ಮತ್ತು ಬಳ್ಳಾರಿ ಪಟ್ಟಣಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದು ರಾಜ್ಯದ ಬಳ್ಳಾರಿ, ಮೈಸೂರು, ಕಲಬುರ್ಗಿ ಹಾಗೂ ವಿಜಯಪುರ ನಗರಗಳನ್ನು ಈ ಯೋಜನಯ ವ್ಯಾಪ್ತಿಗೆ ತಂದು ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಕೋರಿದ್ದಾರೆ.
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳ ತೃಪ್ತಿದಾಯಕವಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ ಚರ್ಚೆಗಿಂತ ಈ ನಗರಗಳಲ್ಲಿನ ಬಾಕಿ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳುವ ಅಗತ್ಯವಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ. ಕೇಂದ್ರ ಸರ್ಕಾರವು ಕಾಲ ಕಾಲಕ್ಕೆ ಅನುದಾನ ಕೊಡುತ್ತಿದೆ. ಈ ವರ್ಷವೂ ಕೂಡ 500 ಕೋಟಿ ರುಗಳನ್ನು ಬಿಡುಗಡೆ ಮಾಡಿದೆ. ಆದರೆ ಕೊರೋನಾ ಕಾರಣದಿಂದಾಗಿ ಕಾಮಗಾರಿಗಳು ಮಂದಗತಿಯಲ್ಲಿ ನಡೆದಿವೆ ಎಂದು ತಿಳಿಸಿದರು.

Share This Article
Leave a comment