Editorial

ಸಮಾಜ ಬದಲಾವಣೆ ಆಗಬೇಕು….

ಸಮಾಜ ಬದಲಾಗಬೇಕು ನಿಜ,
ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.?

ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ?

ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ?

ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ. ಆದರೆ ವಾಸ್ತವ ಅಳವಡಿಕೆ ಅಸಾಧ್ಯ. !

ಶ್ರೀಮಂತರಿಗೆ ಬದಲಾವಣೆ ಅಗತ್ಯವಿಲ್ಲ. ಬಡವರಿಗೆ ಬದಲಾಯಿಸುವ ಶಕ್ತಿ ಇಲ್ಲ. !

ನಮ್ಮ ಜನ ಬದಲಾಗದೆ ಏನೂ ಮಾಡಲು ಸಾಧ್ಯವಿಲ್ಲ. !

ಮೊದಲು ನೀವು ಬದಲಾಗಿ,
ಆಮೇಲೆ ಬೇರೆಯವರ ಬಗ್ಗೆ ಮಾತನಾಡಿ.!

ಎಲ್ಲ ಎಲ್ಲವನು ಅರಿತು ಫಲವೇನು,
ತನ್ನ ತಾ ಅರಿಯಬೇಕಲ್ಲವೇ !

ಲೋಕದಾ ಡೊಂಕ ನೀವೇಕೆ ತಿದ್ದುವಿರು,
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ,
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ !

ಎಲ್ಲರೂ ಕಳ್ಳರು, ಎಲ್ಲರೂ ಭ್ರಷ್ಟರು, ಹಾಗಾದರೆ ಬದಲಾವಣೆ ಮಾಡುವುದು ಯಾರನ್ನ.?

ಬದಲಾವಣೆ ಒಂದು ಕನಸು ಭ್ರಮೆ. ಸುಮ್ಮನೆ ಬೇರೆ ಕೆಲಸ ನೋಡಿಕೊಳ್ಳಿ. !

ಜನ ಬದಲಾದರೆ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. !

ಸಮಾಜ ಬದಲಾಗಬೇಕಾದರೆ ಮೊದಲು ಜನ ಬದಲಾಗಬೇಕು. !

ಒಳ್ಳೆಯ ಸರ್ಕಾರದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. !

ಸರ್ಕಾರ ಒಳ್ಳೆಯದು ಬರಬೇಕಾದರೆ ಮೊದಲು ಜನ ಬದಲಾಗಬೇಕು. !

ಹೌದು,
ಈ ರೀತಿಯ ಚರ್ಚೆಗಳು ದಿನನಿತ್ಯ ನಿರಂತರವಾಗಿ ಆಗುತ್ತಲೇ ಇದೆ.

ಸ್ವಲ್ಪ ಮಟ್ಟಿಗೆ ಉತ್ತರಗಳೂ ಸಿಗಬಹುದು.

ಅನೇಕರು ಅನೇಕ ರೀತಿಯಲ್ಲಿ ವ್ಯಾಖ್ಯಾನಿಸಬಹುದು.

ಬದಲಾವಣೆ ಒಪ್ಪದ ಜನ ಇನ್ನೂ ಅನೇಕ ರೀತಿಯಲ್ಲಿ ವೇದಾಂತಗಳನ್ನು ಉವಾಚಿಸಿ ನಮ್ಮ ಬಾಯಿ ಮುಚ್ಚಿಸಬಹುದು !

ಹಾಗೆಂದು ಸುಮ್ಮನೆ ಇರುವುದು ಉಚಿತವೇ ?

ಯಥಾಸ್ಥಿತಿ ಒಪ್ಪಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕೆ ?

ವ್ಯವಸ್ಥೆಯ ಲಾಭ ಪಡೆಯುತ್ತಿರುವ ಶೋಷಕರ ಶೋಷಣೆ ಪ್ರಶ್ನೆಸಬಾರದೆ ?

ಕನಿಷ್ಠ ನಮ್ಮ ಪ್ರಯತ್ನ ಮಾಡಬಾರದೆ‌ ?

ಆದರೆ ವಾಸ್ತವ. ?

ನಮ್ಮ ಮನಗಳಲ್ಲಿ,
ನಮ್ಮ ಮನೆಗಳಲ್ಲಿ,
ನಮ್ಮ ಮತಗಳಲ್ಲಿ.
ಬದಲಾವಣೆಯಾಗಬೇಕಿದೆ.

ಆಗ ನಮ್ಮೆಲ್ಲರ ಕನಸಿನ ಸಮ ಸಮಾಜದ ಕನಸು ಸಾಧ್ಯವಾಗಬಹುದು.

ಜನರ ಜೀವನಮಟ್ಟ ಸುಧಾರಣೆಯಾಗಬಹುದು.

ಅದಕ್ಕಾಗಿ ನಾವು ಮಾಡಬೇಕಾದ ಮೊದಲನೆಯ ಕೆಲಸ
ನಮ್ಮ ಮನಸ್ಸುಗಳನ್ನು ಜಾಗೃತಾವಸ್ಥೆಯಲ್ಲಿ ಇರುವಂತೆ ನೋಡಿಕೊಳ್ಳುವುದು.

ನಮ್ಮ ಸಂಪರ್ಕಕ್ಕೆ ಬರುವ ಎಲ್ಲರಿಗೂ ಈ ಬಗ್ಗೆ ಯೋಚಿಸುವಂತೆ ಮಾಡುವುದು.
ಆ ಬದಲಾವಣೆಯ ನಿರೀಕ್ಷೆಯಲ್ಲಿ ………………

ವಿವೇಕಾನಂದ ಹೆಚ್ ಕೆ

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024