ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದಾಸ್ಯಕ್ಕೆ ಒಳಗಾಗದೇ, ಅವುಗಳಿಂದ ದೂರ ಇರಬೇಕು. ಮೊಬೈಲ್ ಬಳಕೆಯ ಬಗ್ಗೆಯೂ ಎಚ್ಚರಿಕೆಯಿಂದ ಇರುವಂತೆ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ನಿಕಟಪೂರ್ವ ಪ್ರಾಂಶುಪಾಲ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಸಿ.ಚನ್ನಕೃಷ್ಣಯ್ಯರವರು ಕರೆ ನೀಡಿದರು.
ಮಂಡ್ಯ ನಗರದ ಪಿಇಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಇಂದು ನಡೆದ ಶಿಕ್ಷಕರ ಶಾಲಾ ವಾಸ್ತವ್ಯ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಏಕೆ ಓದಬೇಕು ಮತ್ತು ಹೇಗೆ ಓದಬೇಕು ಎಂಬುದರ ಬಗ್ಗೆ ಮಕ್ಕಳಿಗೆ ಉದಾಹರಣೆಯ ಮೂಲಕ ಮನವರಿಕೆ ಮಾಡಿಕೊಟ್ಟರು.
ಪರೀಕ್ಷೆಗೆ ಇನ್ನೂ 90 ದಿನಗಳು ಉಳಿದಿದ್ದು, ಇಂದಿನಿಂದಲೇ ಶ್ರಮವಹಿಸಿ ಪ್ರತಿದಿನ ಕನಿಷ್ಟ 6 ಗಂಟೆಗಳ ಕಾಲ ಅಭ್ಯಾಸ ಮಾಡಿದರೆ, ಹೆಚ್ಚು ಅಂಕ ಗಳಿಸಿ, ಉತ್ತೀರ್ಣರಾಗಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಕ ಶಿವಣ್ಣಮಂಗಲ ಮಾತನಾಡಿ, ಶಾಲಾ ವಾಸ್ತವ್ಯ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮವಾಗಿದ್ದು, ಇದು ಮಕ್ಕಳ ಕಲಿಕೆಗೆ ಪ್ರೇರಣಾತ್ಮಕವಾಗಿದ್ದು, ಶಿಕ್ಷಕರು, ಪೋಷಕರು, ಮಕ್ಕಳು ಮತ್ತು ಸಮುದಾಯದ ಒಟ್ಟು ಸಹಕಾರದಿಂದ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ ಎಂದು ಸಲಹೆ ನೀಡಿದರು
ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಯಶಸ್ಸು ಸಾಧ್ಯ ಎಂದು ಪ್ರೇರೇಪಣಾ ನುಡಿಗಳನ್ನಾಡಿದರು.
ಮುಖ್ಯಶಿಕ್ಷಕರಾದ ಶ್ರೀಮತಿ ಲತಾರವರು ಸ್ವಾಗತಿಸಿ, ಶಿಕ್ಷಕರಾದ ಟಿ.ಅಶೋಕ್ ರವರು ವಂದಿಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಮಧುಸೂದನ್, ಮಹೇಶ್, ರವಿಚಂದ್ರ ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ